12:03 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾಗಿ ಯಶೋದಾ ಶೆಟ್ಟಿ ಪುನರಾಯ್ಕೆ

26/09/2023, 16:20

ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ದ ಮಹಾಸಭೆಯು ಒಕ್ಕೂಟದ ಸಭಾಂಗಣದಲ್ಲಿ ಯಶೋಧ ಶೆಟ್ಟಿ
ಅಜೆಕಾರು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಒಕ್ಕೂಟದ ಕಾರ್ಯದರ್ಶಿಯವರಾದ ವಸಂತಿ ಪಿ. ಸುವರ್ಣ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಒಕ್ಕೂಟಕ್ಕೆ ನೂತನ ಕಾರ್ಯಕಾರಿ ಸಮಿತಿಯನ್ನು ರಚನೆ ಮಾಡಲಾಗಿದ್ದು,
ಯಶೋಧ ಶೆಟ್ಟಿ ಅಜೆಕಾರ್ ಅವರು ಅಧ್ಯಕ್ಷರಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು .
ಸಾವಿತ್ರಿ ಮನೋಹರ್ ಅವರು ಉಪಾಧ್ಯಕ್ಷರಾಗಿ , ಅರುಂಧತಿ ಆಚಾರ್ ಅವರು ಕಾರ್ಯದರ್ಶಿಯಾಗಿ , ಶೋಭಾ ಪ್ರಸಾದ್ ಜೊತೆ ಕಾರ್ಯದರ್ಶಿಯಾಗಿ, ಶ್ರೀಲತಾ ಶರ್ಮ ಅವರು ಕೋಶಾಧಿಕಾರಿಯಾಗಿ ಆಯ್ಕೆಗೊಂಡರು. ಪ್ರಭಾವತಿ ಈದು, ರತ್ನಾವತಿ ಎನ್ ನಾಯಕ್ , ವಸಂತಿ ಪಿ ಸುವರ್ಣ, ಜಯಂತಿ ಶೆಟ್ಟಿ , ಕಾಂತಿ ಶೆಟ್ಟಿ, ಜ್ಯೋತಿ ಲಕ್ಷ್ಮಿಯವರನ್ನು ಒಕ್ಕೂಟದ ಪದಾಧಿಕಾರಿಗಳಾಗಿ ನೇಮಕ ಮಾಡಲಾಯಿತು. ಒಕ್ಕೂಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಹಾಗೂ ಶಿಶು ಪಾಲನಾ ಕೇಂದ್ರ ನಡೆಸಲ್ಪಡುತ್ತಿದ್ದು ಕೌಟುಂಬಿಕ ಕಲಹಕ್ಕೆ ಸಂಬಂಧಪಟ್ಟ ದೂರುಗಳನ್ನು ದಾಖಲಿಸಬಹುದಾಗಿದೆ ಹಾಗೂ ಶಿಶುಪಾಲನ ಕೇಂದ್ರದಲ್ಲಿ ಆರು ತಿಂಗಳಿಂದ ಆರು ವರ್ಷದವರೆಗಿನ ಮಕ್ಕಳ 8ಉದ್ಯೋಗಸ್ಥ ಪೋಷಕರು ಮಕ್ಕಳನ್ನು ದಾಖಲು ಮಾಡಬಹುದಾಗಿದೆ ಎಂದು ಅಧ್ಯಕ್ಷರು ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.
ರತ್ನಾವತಿ ನಾಯಕ್ ರವರು ಸ್ವಾಗತಿಸಿದರು ಶ್ರೀಲತಾ ಶರ್ಮ ರವರು ಪ್ರಾರ್ಥನೆ ಗೀತೆ ಹಾಡಿದರು. ಕಾಂತಿ ಶೆಟ್ಟಿ ಅವರು ವಂದಿಸಿದರು ಸಾಂತ್ವನ ಕೇಂದ್ರದ ಸಿಬ್ಬಂದಿಗಳು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು