3:25 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾಗಿ ಯಶೋದಾ ಶೆಟ್ಟಿ ಪುನರಾಯ್ಕೆ

26/09/2023, 16:20

ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ದ ಮಹಾಸಭೆಯು ಒಕ್ಕೂಟದ ಸಭಾಂಗಣದಲ್ಲಿ ಯಶೋಧ ಶೆಟ್ಟಿ
ಅಜೆಕಾರು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಒಕ್ಕೂಟದ ಕಾರ್ಯದರ್ಶಿಯವರಾದ ವಸಂತಿ ಪಿ. ಸುವರ್ಣ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಒಕ್ಕೂಟಕ್ಕೆ ನೂತನ ಕಾರ್ಯಕಾರಿ ಸಮಿತಿಯನ್ನು ರಚನೆ ಮಾಡಲಾಗಿದ್ದು,
ಯಶೋಧ ಶೆಟ್ಟಿ ಅಜೆಕಾರ್ ಅವರು ಅಧ್ಯಕ್ಷರಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು .
ಸಾವಿತ್ರಿ ಮನೋಹರ್ ಅವರು ಉಪಾಧ್ಯಕ್ಷರಾಗಿ , ಅರುಂಧತಿ ಆಚಾರ್ ಅವರು ಕಾರ್ಯದರ್ಶಿಯಾಗಿ , ಶೋಭಾ ಪ್ರಸಾದ್ ಜೊತೆ ಕಾರ್ಯದರ್ಶಿಯಾಗಿ, ಶ್ರೀಲತಾ ಶರ್ಮ ಅವರು ಕೋಶಾಧಿಕಾರಿಯಾಗಿ ಆಯ್ಕೆಗೊಂಡರು. ಪ್ರಭಾವತಿ ಈದು, ರತ್ನಾವತಿ ಎನ್ ನಾಯಕ್ , ವಸಂತಿ ಪಿ ಸುವರ್ಣ, ಜಯಂತಿ ಶೆಟ್ಟಿ , ಕಾಂತಿ ಶೆಟ್ಟಿ, ಜ್ಯೋತಿ ಲಕ್ಷ್ಮಿಯವರನ್ನು ಒಕ್ಕೂಟದ ಪದಾಧಿಕಾರಿಗಳಾಗಿ ನೇಮಕ ಮಾಡಲಾಯಿತು. ಒಕ್ಕೂಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಹಾಗೂ ಶಿಶು ಪಾಲನಾ ಕೇಂದ್ರ ನಡೆಸಲ್ಪಡುತ್ತಿದ್ದು ಕೌಟುಂಬಿಕ ಕಲಹಕ್ಕೆ ಸಂಬಂಧಪಟ್ಟ ದೂರುಗಳನ್ನು ದಾಖಲಿಸಬಹುದಾಗಿದೆ ಹಾಗೂ ಶಿಶುಪಾಲನ ಕೇಂದ್ರದಲ್ಲಿ ಆರು ತಿಂಗಳಿಂದ ಆರು ವರ್ಷದವರೆಗಿನ ಮಕ್ಕಳ 8ಉದ್ಯೋಗಸ್ಥ ಪೋಷಕರು ಮಕ್ಕಳನ್ನು ದಾಖಲು ಮಾಡಬಹುದಾಗಿದೆ ಎಂದು ಅಧ್ಯಕ್ಷರು ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.
ರತ್ನಾವತಿ ನಾಯಕ್ ರವರು ಸ್ವಾಗತಿಸಿದರು ಶ್ರೀಲತಾ ಶರ್ಮ ರವರು ಪ್ರಾರ್ಥನೆ ಗೀತೆ ಹಾಡಿದರು. ಕಾಂತಿ ಶೆಟ್ಟಿ ಅವರು ವಂದಿಸಿದರು ಸಾಂತ್ವನ ಕೇಂದ್ರದ ಸಿಬ್ಬಂದಿಗಳು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು