4:21 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕಾರ್ಕಳ: ತಮಿಳುನಾಡು ಮೂಲದ ಲಾರಿ ಚಾಲಕನ ಇರಿದು ಕೊಲೆ; ಇನ್ನೋರ್ವ ಚಾಲಕನ ಮೇಲೆ ಶಂಕೆ

01/02/2023, 09:40

ಕಾರ್ಕಳ(reporterkarnataka.com) ಲಾರಿ ಚಾಲಕನನ್ನು ಆಯುಧದಿಂದ ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಮುಡ್ರಾಲು ಸಮೀಪದ ಗೇರುಬೀಜ ಪ್ಯಾಕ್ಟರಿ ಬಳಿ ನಡೆದಿದೆ.
ತಮಿಳುನಾಡು ಮೂಲದ ಮಣಿ (36) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮುಡ್ರಾಲುನ ಫ್ಯಾಕ್ಟರಿ ಗೆ ಪ್ರತಿವರ್ಷವೂ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅವರುಗಳು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. ಅದರಂತೆ ಜ.30ರಂದು ಸಂಜೆ 4:00 ಗಂಟೆಗೆ ಗೇರುಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು ಅವರುಗಳು ಅನ್ ಲೋಡ್ ಮಾಡಿ ಹೋಗಿದ್ದು ಇನ್ನೆರಡು ಲಾರಿಗಳು ಸಂಜೆ 5:30 ಗಂಟೆಗೆ ಬಂದಿದ್ದು ತಡವಾದ್ದರಿಂದ ಲಾರಿಯು ಅನ್‌ಲೋಡ್ ಆಗದೇ ಫ್ಯಾಕ್ಟರಿಯ ಬಳಿ ನಿಂತುಕೊಂಡಿತ್ತು. ಲಾರಿಗಳ ಚಾಲಕ ಹಾಗೂ ಬದಲಿ ಚಾಲಕರುಗಳು ಕೂಡಾ ಅಲ್ಲಿಯೇ ಇದ್ದು ರಾತ್ರಿ 8:30 ಗಂಟೆಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರೋರ್ವರಿಗೆ ಫ್ಯಾಕ್ಟರಿಯ ಮೇಲ್ಗಡೆ ಕೆಲಸ ಮಾಡುತ್ತಿರುವಾಗ ಲಾರಿ ನಿಲ್ಲಿಸಿದ ಸ್ಥಳದಿಂದ ಜೋರಾಗಿ ಬೊಬ್ಬೆ ಕೇಳಿಸಿದ್ದು, ಅಲ್ಲಿಗೆ ಹೋಗಿ ನೋಡಿದಾಗ ಲಾರಿಯ ಚಾಲಕ ಮಣಿ (36) ಲಾರಿಯ ಎದುರುಗಡೆ ಆತನ ಕುತ್ತಿಗೆಗೆ ಶಾಲ್ ಬಿಗಿದು ಯಾವುದೋ ಆಯುಧದಿಂದ ಇರಿದು ಕೊಲೆ ಮಾಡಿರುವುದು ಕಂಡುಬಂದಿದೆ.

ಲಾರಿಯ ಇನ್ನೋರ್ವ ಚಾಲಕ ವೀರಬಾಹು ಹಾಗೂ ಮೃತ ಮಣಿ ಗಲಾಟೆ ಮಾಡಿಕೊಳ್ಳುತ್ತಿದ್ದು, ಯಾವುದೋ ಕಾರಣದಿಂದ ಲಾರಿಯ ಇನ್ನೋರ್ವ ಚಾಲಕ ವೀರಬಾಹು ಮಣಿಯನ್ನು ಕೊಲೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು