9:27 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕಾರ್ಕಳ ಉತ್ಸವಕ್ಕೆ ಹಣದ ಹೊಳೆ: ತುಳು ಶಿಕ್ಷಕರ ಸೇವೆಗಿಲ್ಲ ಬೆಲೆ: 2 ವರ್ಷದಿಂದ ಗೌರವ ಧನ ಕೊಡದಿದ್ದರೂ ತುಟಿ ಬಿಚ್ಚದ ಸಂಸ್ಕೃತಿ ಸಚಿವರು!!

18/03/2022, 17:06

ಮಂಗಳೂರು(reporterkarnataka.com): ನಮ್ಮ ರಾಜಕಾರಣಿಗಳಲ್ಲಿ, ಅಧಿಕಾರಸ್ಥರಲ್ಲಿ ಸೋಗಲಾಡಿತನ ಯಾವ ಮಟ್ಟದಲ್ಲಿ ಬೆಳೆದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ನಿಮಗೊತ್ತಿರುವಾಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಅವರ ತವರು ಕ್ಷೇತ್ರದಲ್ಲಿ ಕಾರ್ಕಳ ಉತ್ಸವ ನಡೆಯುತ್ತಿದೆ. ಇದರ ಭಾಗವಾಗಿ ಕಾರ್ಕಳದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ನಲ್ಲಿ ತಿರುಗಾಟ ನಡೆಸಲಾಗಿದೆ. ಇನ್ನೊಂದು ಕಡೆ ನಮ್ಮ ಕರಾವಳಿಯ ಮಾತೃ ಭಾಷೆಯಾದ ತುಳು ಭಾಷೆಯನ್ನು ಕಲಿಸುವ ಬಡ ಶಿಕ್ಷಕರಿಗೆ 2 ವರ್ಷದಿಂದ ಸಂಬಳ ನೀಡದೆ ದುಡಿಸಿ ಸತಾಯಿಸಲಾಗುತ್ತಿದೆ.

ಕಾರ್ಕಳದ ಪೌರ ಕಾರ್ಮಿಕರನ್ನು ಹೆಲಿಕಾಪ್ಟರ್ ಸುತ್ತಿಸಿದ ಬಗ್ಗೆ ಯಾರು ತಕರಾರು ಎತ್ತುವುದಿಲ್ಲ. ಆದರೆ ಹೊಟ್ಟೆಗೆ ಹಿಟ್ಟಿಲ್ಲದವನ ಜುಟ್ಟಿಗೆ ಮಲ್ಲಿಗೆ ಬೇಕೇ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಪೌರ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳ ಕೊರತೆ ಕಾಡುತ್ತಿದೆ. ಅವರಿಗೆ ಶೂ ಕೊಡುವುದಿಲ್ಲ, ಕೈಗೆ ಗ್ಲೌಸ್ ಇಲ್ಲ. ಆರೋಗ್ಯ ಸಮಸ್ಯೆ ಬಂದ್ರೆ ಸರಿಯಾದ ಹೆಲ್ತ್ ಇನ್ಸೂರೆನ್ಸ್ ಇಲ್ಲ. ಈ ಎಲ್ಲ ಇಲ್ಲಗಳ ನಡುವೆ, ಒಬ್ಬರಿಗೆ ತಲಾ 2 ಸಾವಿರ ರೂ. ಖರ್ಚು ಮಾಡಿ ಹೆಲಿಕಾಪ್ಟರ್ ನಲ್ಲಿ ಸುತ್ತಾಡಿಸುವ ಅಗತ್ಯವಿತ್ತೇ ಎಂದು ಪ್ರಜ್ಞಾವಂತರು ಪ್ರಶ್ನಿಸುತ್ತಾರೆ. ಈ ನಡುವೆ ತುಳು ಭಾಷೆ ಕಲಿಸುವ ಸುಮಾರು 43 ಮಂದಿ ಶಿಕ್ಷಕರಿಗೆ ಕಳೆದ 30 ತಿಂಗಳಿನಿಂದ ಗೌರವ ಧನ ನೀಡಿಲ್ಲ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 42 ಶಾಲೆಗಳಲ್ಲಿ ತುಳು ಭಾಷೆಯನ್ನು ತೃತೀಯ ಭಾಷೆಯಾಗಿ ಕಲಿಸಲಾಗುತ್ತಿದೆ. ಇದಕ್ಕೆ 43 ತುಳು ಶಿಕ್ಷಕರನ್ನು ನೇಮಿಸಲಾಗಿತ್ತು. ಇವರಿಗೆ ತಿಂಗಳಿಗೆ ಜುಜುಬಿ 3 ಸಾವಿರ ರೂ. ಗೌರವ ಧನ ನಿಗದಿಪಡಿಸಲಾಗಿತ್ರು. ಆದರೆ ಈ ಶಿಕ್ಷಕರಿಗೆ 30 ತಿಂಗಳಿನಿಂದ ಆ  ಗೌರವ ಧನವನ್ನು ಕೂಡ ನೀಡಿಲ್ಲ. 

ತುಳು ಶಿಕ್ಷಕರಲ್ಲಿ ಹೆಚ್ಚಿನವರು ತೀರಾ ಬಡವರು, ವಿಕಲಚೇತನರೂ ಕೂಡ ಇದ್ದಾರೆ. ಜುಜುಬಿ 3 ಸಾವಿರಕ್ಕಾಗಿ ತಮ್ಮ ಅಮೂಲ್ಯ ಸಮಯವನ್ನು ತುಳುವಿಗಾಗಿ ಮೀಸಲಿಟ್ಟಿದ್ದಾರೆ. ಆದರೆ ಸರಕಾರ ಇವರಿಗೆ ಗೌರವ ಧನ ಕೊಡುತ್ತಿಲ್ಲ. ಉಸ್ತವಾರಿ ಸಚಿವ ಸುನಿಲ್ ಕುಮಾರ್ ಅವರು ತನಗೆ ಆ ವಿಷಯವೇ ಗೊತ್ತಿಲ್ಲದಂತೆ ವರ್ತಿಸುತ್ತಾರೆ. ತುಳು ಶಿಕ್ಷಕರ ಗೌರವ ಧನದ ಜವಾಬ್ದಾರಿಯನ್ನು ತುಳು ಸಾಹಿತ್ಯ ಅಕಾಡೆಮಿಗೆ ವಹಿಸಲಾಗಿತ್ತು. ಆದರೆ ಅಕಾಡೆಮಿಗೆ ಸರಕಾರ ಅನುದಾನ ನೀಡಿದರೆ ತಾನೆ ಸಂಬಳ ನೀಡಲು ಸಾಧ್ಯ. ಅದಲ್ಲದೆ ಈ ಎಲ್ಲ ಭಾಷಾ ಅಕಾಡೆಮಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುತ್ತದೆ. ಸುನಿಲ್ ಕುಮಾರ್ ಇದರ ಸಚಿವರು.

……

ಇತ್ತೀಚಿನ ಸುದ್ದಿ

ಜಾಹೀರಾತು