6:05 AM Wednesday20 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ಕಾರ್ಕಳ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ತಮ್ಮನಿಗೆ ಕರೆ ಮಾಡಿದ್ದ ಆಕೆ ಹೇಳಿದ್ದೇನು?

16/10/2021, 17:52

ಕಾರ್ಕಳ(reporterkarnataka.com): ಇಬ್ಬರು‌ ಮಕ್ಕಳೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೋಳ ಪದವು ನಿವಾಸಿ ಸವಿತಾ ಪೂಜಾರಿ (36) ಅವರು ತಮ್ಮ ಇಬ್ಬರು ಮಕ್ಕಳಾದ ವಿಷ್ಣು (10) ಹಾಗೂ ಆಶ್ಮಿತಾ ಎಂಬ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ. ಇವರು ಗಂಡನನ್ನು ಬಿಟ್ಟು ತಾಯಿ ಮನೆಯಾದ ಬೋಳ ಪದವು ಎಂಬಲ್ಲಿ ವಾಸಿಸುತ್ತಿದ್ದರು. ಬೀಡಿ ಕಟ್ಟಿಕೊಂಡು ಜೀವನ ನಡೆಸುತ್ತಿದ್ದರು. ಅಕ್ಟೋಬರ್ 12ರಂದು ಸಂಜೆ 4.30ಕ್ಕೆ ಇಬ್ಬರು ಮಕ್ಕಳೊಂದಿಗೆ ಮುಂಡ್ಕೂರಿನ ನಾನಿಲ್ತಾರಿನಲ್ಲಿರುವ ಅಜ್ಜಿ‌ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದರು. ಆದರೆ ಬಳಿಕ ಅಲ್ಲಿಗೂ ಹೋಗದೆ ಮನೆಗೂ ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ. ಸವಿತಾ ಪೂಜಾರಿ ಒಂದು ವಾರದ ಹಿಂದೆ ತಮ್ಮನಿಗೆ ಪೋನ್ ಮಾಡಿ

ನಾನು ಉಮೇಶ್ ಎಂಬವರನ್ನು ಮದುವೆಯಾಗುತ್ತೇನೆ ಎಂದು ಹೇಳಿದ್ದರಂತೆ. ಅದಕ್ಕೆ ತಮ್ಮ ಒಪ್ಪಿರಲಿಲ್ಲ. ಹೀಗಾಗಿ ಉಮೇಶ್ ಎಂಬವರೊಂದಿಗೆ ಸವಿತಾ ಹೋಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು