9:04 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾರ್ಕಳ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ತಮ್ಮನಿಗೆ ಕರೆ ಮಾಡಿದ್ದ ಆಕೆ ಹೇಳಿದ್ದೇನು?

16/10/2021, 17:52

ಕಾರ್ಕಳ(reporterkarnataka.com): ಇಬ್ಬರು‌ ಮಕ್ಕಳೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೋಳ ಪದವು ನಿವಾಸಿ ಸವಿತಾ ಪೂಜಾರಿ (36) ಅವರು ತಮ್ಮ ಇಬ್ಬರು ಮಕ್ಕಳಾದ ವಿಷ್ಣು (10) ಹಾಗೂ ಆಶ್ಮಿತಾ ಎಂಬ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ. ಇವರು ಗಂಡನನ್ನು ಬಿಟ್ಟು ತಾಯಿ ಮನೆಯಾದ ಬೋಳ ಪದವು ಎಂಬಲ್ಲಿ ವಾಸಿಸುತ್ತಿದ್ದರು. ಬೀಡಿ ಕಟ್ಟಿಕೊಂಡು ಜೀವನ ನಡೆಸುತ್ತಿದ್ದರು. ಅಕ್ಟೋಬರ್ 12ರಂದು ಸಂಜೆ 4.30ಕ್ಕೆ ಇಬ್ಬರು ಮಕ್ಕಳೊಂದಿಗೆ ಮುಂಡ್ಕೂರಿನ ನಾನಿಲ್ತಾರಿನಲ್ಲಿರುವ ಅಜ್ಜಿ‌ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದರು. ಆದರೆ ಬಳಿಕ ಅಲ್ಲಿಗೂ ಹೋಗದೆ ಮನೆಗೂ ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ. ಸವಿತಾ ಪೂಜಾರಿ ಒಂದು ವಾರದ ಹಿಂದೆ ತಮ್ಮನಿಗೆ ಪೋನ್ ಮಾಡಿ

ನಾನು ಉಮೇಶ್ ಎಂಬವರನ್ನು ಮದುವೆಯಾಗುತ್ತೇನೆ ಎಂದು ಹೇಳಿದ್ದರಂತೆ. ಅದಕ್ಕೆ ತಮ್ಮ ಒಪ್ಪಿರಲಿಲ್ಲ. ಹೀಗಾಗಿ ಉಮೇಶ್ ಎಂಬವರೊಂದಿಗೆ ಸವಿತಾ ಹೋಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು