9:08 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕಾರ್ಕಳ: ಕೇರಳ ಮೂಲದ ವ್ಯಕ್ತಿಯ ಸುಟ್ಟ ಶವ ಪತ್ತೆ: ಕೊಲೆ ಶಂಕೆ; ಕೆಲಸಗಾರ ನಾಟ್ ರಿಚಬಲ್

21/10/2022, 22:09

ಕಾರ್ಕಳ(reporterkarnataka.com): ಸಾಣೂರು ಶುಂಠಿಗುಡ್ಡೆ ಎಂಬಲ್ಲಿ ವ್ಯಕ್ತಿ ಯೊಬ್ಬರ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಗೋಪಿ (60) ಕೇರಳ ಮೂಲದವರು ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ ಕೊಲೆಗೈದು ಸುಡಲಾಗಿದೆ ಎಂದು ಸಂಶಯ ವ್ಯಕ್ತವಾಗಿದೆ.

ಕಾರ್ಕಳದ ವಿವೇಕಾನಂದ ಶೆಣೈ ಎಂಬುವವರು ಸಾಣೂರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿ ಕೇರಳದ ಬಿಜು ಥೋಮಸ್ ಎಂಬುವವರ ರಬ್ಬರ್ ಪ್ಲಾಂಟೇಶನ್ ಪಡೆದುಕೊಂಡು ವ್ಯವಹಾರ ಮಾಡಿಕೊಂಡಿದ್ದು ದಿಲೀಪ್, ವಿವೇಕಾನಂದ ಶೆಣೈ ಎಂಬುವವರೊಂದಿಗೆ ಗೇರು ಬೀಜ ಕಾರ್ಖಾನೆಯ ಪಾಲುದಾರನಾಗಿ ಕೆಲಸ ಮಾಡಿಕೊಂಡಿದ್ದರು.

ಪ್ಲಾಂಟೇಷನ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದಿಲೀಪ್ ಅವರಿಗೆ ಗ್ರಾಸ್ ಕಟ್ಟಿಂಗ್ ಮಾಡಲು ಬಂದ ವಸಂತ ಎಂಬಾತ ಕರೆ ಮಾಡಿ ಗೇಟಿನ ಮುಂದೆ ಸ್ವಲ್ಪ ದೂರದಲ್ಲಿ ದಾರಿಯ ಬದಿಯಲ್ಲಿ ಮೃತದೇಹದಂತೆ ಪತ್ತೆಯಾದುದರ ಕುರಿತು ತಿಳಿಸಿದ್ದು ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದಾಗ ಮೃತದೇಹ ಪತ್ತೆಯಾಗಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಗೋಪಿ ಎಂಬಾತನ ಮೃತದೇಹ ಇದಾಗಿದ್ದು ಮೃತದೇಹದ ಹತ್ತಿರ ಸಿಗರ್ ಲೈಟರ್ ಹಾಗೂ ಪೆಟ್ರೋಲ್ ಕ್ಯಾನಿನ ಮುಚ್ಚಳ ಕಂಡುಬಂದಿದೆ. ಇನ್ನೊಬ್ಬ ಕಾರ್ಮಿಕ ಬಾಹುಲೇಯನ್ ಎಂಬಾತನಿಗೆ ಕರೆ ಮಾಡಿದಾಗ ಮೊಬೈಲ್ ಪೋನ್ ಸ್ವಿಚ್ಆಫ್ ಆಗಿದೆ.
ಎರಡು ದಿನಗಳ ಹಿಂದೆ ದಿಲೀಪ್ ರವರೊಂದಿಗೆ ಗೋಪಿ ಮಾತನಾಡಿದ್ದು ಬಳಿಕ ಈ ಕೊಲೆ ನಡೆದಿದೆ .ಜೊತೆಯಲ್ಲಿದ್ದ ಕೆಲಸಗಾರ ಬಾಹುಲೇಯನ್ ಕಾಣೆಯಾಗಿರುವುದರಿಂದ ಗೋಪಿಯನ್ನು ಆತನೇ ಕೊಲೆಗೈದು ಸುಟ್ಟಿದ್ದಾನೆ ಎಂದು ಸಂಶಯಿಸಲಾಗಿದೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು