10:24 PM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಕಾರ್ಮೆಲ್ ಡಿಗ್ರಿ ಕಾಲೇಜಿಗೆ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” ಪ್ರಶಸ್ತಿಯ ಗರಿ.

07/05/2021, 15:52

ಮಂಗಳೂರು(reporterkarnatakanews): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನ ಕಾರ್ಮೆಲ್ ಕಾಲೇಜ್ ಮೊಡಂಕಾಪು ಮುಡಿಗೇರಿಸಿಕೊಂಡಿದೆ. ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿಯು ಒಲಿದು ಬಂದಿದೆ.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜುಗಳು ಸ್ಪರ್ಧಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಡಾ.ಸಿಸ್ಟರ್ ಲತಾ ಫರ್ನಾಂಡಿಸ್ ಎ ಸಿ ಅವರು ತಿಳಿಸಿರುತ್ತಾರೆ.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿಗಳಾದ ಶ್ರೀಮತಿ ಮಧುರ ಕೆ, ಕುಮಾರಿ ದೀಪ್ತಿ ಡಿಸೋಜಾ, ಹಿಂದಿ ಉಪನ್ಯಾಸಕರಾದ ಶ್ರೀಮತಿ ಚಂದ್ರಿಕಾ ರಾವ್ ರನ್ನ ಒಳಗೊಂಡ ‘ಸ್ವಚ್ಛತಾ ಕ್ರಿಯಾ ಯೋಜನಾ’ ಸಮಿತಿ ( ಎಸ್.ಎ.ಪಿ) ಯ ಅತ್ಯಂತ ಮಹತ್ವಪೂರ್ಣ ಯಶಸ್ವಿ ಕಾರ್ಯಚಟುವಟಿಕೆಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಶ್ಲಾಘಿಸಿದೆ. ಈ ಪ್ರಶಸ್ತಿಯನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿಯವರು ಪ್ರಧಾನ ಮಾಡಲಿರುವರು

ಇತ್ತೀಚಿನ ಸುದ್ದಿ

ಜಾಹೀರಾತು