3:55 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಕಾರ್ಮೆಲ್ ಡಿಗ್ರಿ ಕಾಲೇಜಿಗೆ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” ಪ್ರಶಸ್ತಿಯ ಗರಿ.

07/05/2021, 15:52

ಮಂಗಳೂರು(reporterkarnatakanews): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನ ಕಾರ್ಮೆಲ್ ಕಾಲೇಜ್ ಮೊಡಂಕಾಪು ಮುಡಿಗೇರಿಸಿಕೊಂಡಿದೆ. ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿಯು ಒಲಿದು ಬಂದಿದೆ.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜುಗಳು ಸ್ಪರ್ಧಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಡಾ.ಸಿಸ್ಟರ್ ಲತಾ ಫರ್ನಾಂಡಿಸ್ ಎ ಸಿ ಅವರು ತಿಳಿಸಿರುತ್ತಾರೆ.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿಗಳಾದ ಶ್ರೀಮತಿ ಮಧುರ ಕೆ, ಕುಮಾರಿ ದೀಪ್ತಿ ಡಿಸೋಜಾ, ಹಿಂದಿ ಉಪನ್ಯಾಸಕರಾದ ಶ್ರೀಮತಿ ಚಂದ್ರಿಕಾ ರಾವ್ ರನ್ನ ಒಳಗೊಂಡ ‘ಸ್ವಚ್ಛತಾ ಕ್ರಿಯಾ ಯೋಜನಾ’ ಸಮಿತಿ ( ಎಸ್.ಎ.ಪಿ) ಯ ಅತ್ಯಂತ ಮಹತ್ವಪೂರ್ಣ ಯಶಸ್ವಿ ಕಾರ್ಯಚಟುವಟಿಕೆಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಶ್ಲಾಘಿಸಿದೆ. ಈ ಪ್ರಶಸ್ತಿಯನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿಯವರು ಪ್ರಧಾನ ಮಾಡಲಿರುವರು

ಇತ್ತೀಚಿನ ಸುದ್ದಿ

ಜಾಹೀರಾತು