6:32 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಕಾರ್ಮೆಲ್ ಡಿಗ್ರಿ ಕಾಲೇಜಿಗೆ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” ಪ್ರಶಸ್ತಿಯ ಗರಿ.

07/05/2021, 15:52

ಮಂಗಳೂರು(reporterkarnatakanews): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನ ಕಾರ್ಮೆಲ್ ಕಾಲೇಜ್ ಮೊಡಂಕಾಪು ಮುಡಿಗೇರಿಸಿಕೊಂಡಿದೆ. ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿಯು ಒಲಿದು ಬಂದಿದೆ.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜುಗಳು ಸ್ಪರ್ಧಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಡಾ.ಸಿಸ್ಟರ್ ಲತಾ ಫರ್ನಾಂಡಿಸ್ ಎ ಸಿ ಅವರು ತಿಳಿಸಿರುತ್ತಾರೆ.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿಗಳಾದ ಶ್ರೀಮತಿ ಮಧುರ ಕೆ, ಕುಮಾರಿ ದೀಪ್ತಿ ಡಿಸೋಜಾ, ಹಿಂದಿ ಉಪನ್ಯಾಸಕರಾದ ಶ್ರೀಮತಿ ಚಂದ್ರಿಕಾ ರಾವ್ ರನ್ನ ಒಳಗೊಂಡ ‘ಸ್ವಚ್ಛತಾ ಕ್ರಿಯಾ ಯೋಜನಾ’ ಸಮಿತಿ ( ಎಸ್.ಎ.ಪಿ) ಯ ಅತ್ಯಂತ ಮಹತ್ವಪೂರ್ಣ ಯಶಸ್ವಿ ಕಾರ್ಯಚಟುವಟಿಕೆಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಶ್ಲಾಘಿಸಿದೆ. ಈ ಪ್ರಶಸ್ತಿಯನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿಯವರು ಪ್ರಧಾನ ಮಾಡಲಿರುವರು

ಇತ್ತೀಚಿನ ಸುದ್ದಿ

ಜಾಹೀರಾತು