10:40 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಾರ್ಮೆಲ್ ಡಿಗ್ರಿ ಕಾಲೇಜಿಗೆ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” ಪ್ರಶಸ್ತಿಯ ಗರಿ.

07/05/2021, 15:52

ಮಂಗಳೂರು(reporterkarnatakanews): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನ ಕಾರ್ಮೆಲ್ ಕಾಲೇಜ್ ಮೊಡಂಕಾಪು ಮುಡಿಗೇರಿಸಿಕೊಂಡಿದೆ. ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿಯು ಒಲಿದು ಬಂದಿದೆ.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜುಗಳು ಸ್ಪರ್ಧಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಡಾ.ಸಿಸ್ಟರ್ ಲತಾ ಫರ್ನಾಂಡಿಸ್ ಎ ಸಿ ಅವರು ತಿಳಿಸಿರುತ್ತಾರೆ.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿಗಳಾದ ಶ್ರೀಮತಿ ಮಧುರ ಕೆ, ಕುಮಾರಿ ದೀಪ್ತಿ ಡಿಸೋಜಾ, ಹಿಂದಿ ಉಪನ್ಯಾಸಕರಾದ ಶ್ರೀಮತಿ ಚಂದ್ರಿಕಾ ರಾವ್ ರನ್ನ ಒಳಗೊಂಡ ‘ಸ್ವಚ್ಛತಾ ಕ್ರಿಯಾ ಯೋಜನಾ’ ಸಮಿತಿ ( ಎಸ್.ಎ.ಪಿ) ಯ ಅತ್ಯಂತ ಮಹತ್ವಪೂರ್ಣ ಯಶಸ್ವಿ ಕಾರ್ಯಚಟುವಟಿಕೆಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಶ್ಲಾಘಿಸಿದೆ. ಈ ಪ್ರಶಸ್ತಿಯನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿಯವರು ಪ್ರಧಾನ ಮಾಡಲಿರುವರು

ಇತ್ತೀಚಿನ ಸುದ್ದಿ

ಜಾಹೀರಾತು