6:23 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಾರ್ಮಿಕರಿಗೆ ಅವಾಚ್ಯ ಪದಗಳಿಂದ ನಿಂದನೆ:  ಕೃಷ್ಣ ಸಕ್ಕರೆ ಕಾರ್ಖಾನೆ ಮುಖ್ಯ ವ್ಯವಸ್ಥಾಪಕರ ವಿರುದ್ಧ  ಭಾರೀ ಆಕ್ರೋಶ; ಪ್ರತಿಭಟನೆ

09/09/2021, 19:12

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹಲ್ಯಾಳ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ನಿಮ್ಮನ್ನು ಆದಷ್ಟು ಬೇಗ ಕೆಲಸದಿಂದ ತೆಗೆಯುತ್ತೇವೆ ಏನು ಮಾಡುತ್ತೀರಿ ಎಂದು ಧಮ್ಕಿ ಹಾಕಿದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಪ್ರತಿಭಟನಾನಿರತ ಕಾರ್ಮಿಕರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಾರ್ಖಾನೆಯ ಕಾರ್ಮಿಕ ಸಂಘದ ಅಧ್ಯಕ್ಷರು ಮಾತನಾಡಿ, ನಾವು ಸುಮಾರು 20 ವರ್ಷದಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೇವೆ. ಇದುವರೆಗೂ  ನಮ್ಮ ಉದ್ಯೋಗವನ್ನು ಕಾಯಂಗೊಳಿಸಿಲ್ಲ. ಮೂರು ತಿಂಗಳ ನಮ್ಮ ಸಂಬಳ ಸಿಗುತ್ತಿಲ್ಲ. ಕೇಳಿದರೆ ನಿಮ್ಮನ್ನು ಕೆಲಸದಿಂದ ವಜಾ ಮಾಡುತ್ತೇವೆ ಎಂದು ಧಮಕಿ ಹಾಕುತ್ತಾರೆ ಎಂದರು.


ಕೃಷ್ಣ ಸಕ್ಕರೆ ಶುಗರ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜಿ. ಪಾಟೀಲ್ ಅವರು ಕಾರ್ಮಿಕರಿಗೆ ಧಮ್ಕಿ ಹಾಕಿ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.


ಪ್ರತಿಭಟನೆ ಕಾರನ್ನು ಮನವೊಲಿಸಲು ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಯತ್ನಿಸಿದರು. ಪರಪ್ಪ ಸವದಿ ಅವರು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಹೋದರ. ಕೃಷ್ಣ ಸಕ್ಕರೆ ಕಾರ್ಖಾನೆ ಅಧ್ಯಕ್ಷರು ಮಾತಿಗೂ ಕ್ಯಾರೇ ಅನ್ನದ ಪ್ರತಿಭಟನಾಕಾರರು.

ಇತ್ತೀಚಿನ ಸುದ್ದಿ

ಜಾಹೀರಾತು