6:32 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕಾರ್ಮಿಕರಿಗೆ ಅವಾಚ್ಯ ಪದಗಳಿಂದ ನಿಂದನೆ:  ಕೃಷ್ಣ ಸಕ್ಕರೆ ಕಾರ್ಖಾನೆ ಮುಖ್ಯ ವ್ಯವಸ್ಥಾಪಕರ ವಿರುದ್ಧ  ಭಾರೀ ಆಕ್ರೋಶ; ಪ್ರತಿಭಟನೆ

09/09/2021, 19:12

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹಲ್ಯಾಳ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ನಿಮ್ಮನ್ನು ಆದಷ್ಟು ಬೇಗ ಕೆಲಸದಿಂದ ತೆಗೆಯುತ್ತೇವೆ ಏನು ಮಾಡುತ್ತೀರಿ ಎಂದು ಧಮ್ಕಿ ಹಾಕಿದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಪ್ರತಿಭಟನಾನಿರತ ಕಾರ್ಮಿಕರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಾರ್ಖಾನೆಯ ಕಾರ್ಮಿಕ ಸಂಘದ ಅಧ್ಯಕ್ಷರು ಮಾತನಾಡಿ, ನಾವು ಸುಮಾರು 20 ವರ್ಷದಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೇವೆ. ಇದುವರೆಗೂ  ನಮ್ಮ ಉದ್ಯೋಗವನ್ನು ಕಾಯಂಗೊಳಿಸಿಲ್ಲ. ಮೂರು ತಿಂಗಳ ನಮ್ಮ ಸಂಬಳ ಸಿಗುತ್ತಿಲ್ಲ. ಕೇಳಿದರೆ ನಿಮ್ಮನ್ನು ಕೆಲಸದಿಂದ ವಜಾ ಮಾಡುತ್ತೇವೆ ಎಂದು ಧಮಕಿ ಹಾಕುತ್ತಾರೆ ಎಂದರು.


ಕೃಷ್ಣ ಸಕ್ಕರೆ ಶುಗರ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜಿ. ಪಾಟೀಲ್ ಅವರು ಕಾರ್ಮಿಕರಿಗೆ ಧಮ್ಕಿ ಹಾಕಿ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.


ಪ್ರತಿಭಟನೆ ಕಾರನ್ನು ಮನವೊಲಿಸಲು ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಯತ್ನಿಸಿದರು. ಪರಪ್ಪ ಸವದಿ ಅವರು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಹೋದರ. ಕೃಷ್ಣ ಸಕ್ಕರೆ ಕಾರ್ಖಾನೆ ಅಧ್ಯಕ್ಷರು ಮಾತಿಗೂ ಕ್ಯಾರೇ ಅನ್ನದ ಪ್ರತಿಭಟನಾಕಾರರು.

ಇತ್ತೀಚಿನ ಸುದ್ದಿ

ಜಾಹೀರಾತು