4:10 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾರ್ಮಿಕರಿಗೆ ಅವಾಚ್ಯ ಪದಗಳಿಂದ ನಿಂದನೆ:  ಕೃಷ್ಣ ಸಕ್ಕರೆ ಕಾರ್ಖಾನೆ ಮುಖ್ಯ ವ್ಯವಸ್ಥಾಪಕರ ವಿರುದ್ಧ  ಭಾರೀ ಆಕ್ರೋಶ; ಪ್ರತಿಭಟನೆ

09/09/2021, 19:12

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹಲ್ಯಾಳ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ನಿಮ್ಮನ್ನು ಆದಷ್ಟು ಬೇಗ ಕೆಲಸದಿಂದ ತೆಗೆಯುತ್ತೇವೆ ಏನು ಮಾಡುತ್ತೀರಿ ಎಂದು ಧಮ್ಕಿ ಹಾಕಿದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಪ್ರತಿಭಟನಾನಿರತ ಕಾರ್ಮಿಕರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಾರ್ಖಾನೆಯ ಕಾರ್ಮಿಕ ಸಂಘದ ಅಧ್ಯಕ್ಷರು ಮಾತನಾಡಿ, ನಾವು ಸುಮಾರು 20 ವರ್ಷದಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೇವೆ. ಇದುವರೆಗೂ  ನಮ್ಮ ಉದ್ಯೋಗವನ್ನು ಕಾಯಂಗೊಳಿಸಿಲ್ಲ. ಮೂರು ತಿಂಗಳ ನಮ್ಮ ಸಂಬಳ ಸಿಗುತ್ತಿಲ್ಲ. ಕೇಳಿದರೆ ನಿಮ್ಮನ್ನು ಕೆಲಸದಿಂದ ವಜಾ ಮಾಡುತ್ತೇವೆ ಎಂದು ಧಮಕಿ ಹಾಕುತ್ತಾರೆ ಎಂದರು.


ಕೃಷ್ಣ ಸಕ್ಕರೆ ಶುಗರ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜಿ. ಪಾಟೀಲ್ ಅವರು ಕಾರ್ಮಿಕರಿಗೆ ಧಮ್ಕಿ ಹಾಕಿ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.


ಪ್ರತಿಭಟನೆ ಕಾರನ್ನು ಮನವೊಲಿಸಲು ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಯತ್ನಿಸಿದರು. ಪರಪ್ಪ ಸವದಿ ಅವರು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಹೋದರ. ಕೃಷ್ಣ ಸಕ್ಕರೆ ಕಾರ್ಖಾನೆ ಅಧ್ಯಕ್ಷರು ಮಾತಿಗೂ ಕ್ಯಾರೇ ಅನ್ನದ ಪ್ರತಿಭಟನಾಕಾರರು.

ಇತ್ತೀಚಿನ ಸುದ್ದಿ

ಜಾಹೀರಾತು