9:30 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

Karnataka | 15441.17 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ

28/05/2025, 21:56

ಬೆಂಗಳೂರು(reporterkarnataka.com): ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ಹೇಳಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಇಂದಿನ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಮೆ.ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ , ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3000 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಹಾಗೂ ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3020 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಸೃಷ್ಠಿ, ಮೆ. ಎಂವೀ ಎನರ್ಜಿ ಪ್ರೈ.ಲಿ ಸಂಸ್ಥೆ ಯ 5495 ಕೋಟಿ ರೂ. ಹೂಡಿಕೆಯಿಂದ 2508 ಉದ್ಯೋಗ ಸೃಷ್ಟಿಯಾಗಲಿದೆ. ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು 13921 ಕೋಟಿ.ರೂ. ಹೂಡಿಕೆಯಾಗಲಿದ್ದು, 3948 ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಹೇಳಿದರು.


ಸಭೆಯಲ್ಲಿ ಸಚಿವರಾದ ಎಂ. ಬಿ. ಪಾಟೀಲ್, ಚೆಲುವರಾಯಸ್ವಾಮಿ ಪ್ರಿಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್ ಕೆ ಅತೀಕ್, ವಾಣಿಜ್ಯ ಮತ್ರು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು