8:07 AM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

21/04/2025, 22:10

ಹಾವೇರಿ(reporterkarnataka.com): ಹಾವೇರಿಯಲ್ಲಿಂದು ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಯಿತು.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಒಂದೇ ಒಂದು ಹೊಸ ಯೋಜನೆ ಜಾರಿಗೆ ತರಲಿಲ್ಲ, ಒಂದೇ ಒಂದು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿಲ್ಲ, ಶೋಷಿತರ ಹಣ ಅನ್ಯ ಕಾರ್ಯಗಳಿಗೆ ಬಳಸಿಕೊಂಡು, ಅಲ್ಪಸಂಖ್ಯಾತರ ಹೆಸರಿನಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಕೇವಲ ಮುಸಲ್ಮಾನರಿಗೆ ಮಾತ್ರ ಮೀಸಲಾತಿ ಕಲ್ಪಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.



ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್,ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ,ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿ ಕುಮಾರ್,ಮಾಜಿ ಸಚಿವ ಬಿ.ಸಿ. ಪಾಟೀಲ್,ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಶಿವರಾಜ್‌ ಸಜ್ಜನ್‌, ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳೀಕೇರಿ, ಮುಖಂಡರಾದ ಭರತ್ ಬೊಮ್ಮಾಯಿ, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು