9:11 PM Monday23 - March 2026
ಬ್ರೇಕಿಂಗ್ ನ್ಯೂಸ್
ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

ಇತ್ತೀಚಿನ ಸುದ್ದಿ

Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

21/04/2025, 22:10

ಹಾವೇರಿ(reporterkarnataka.com): ಹಾವೇರಿಯಲ್ಲಿಂದು ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಯಿತು.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಒಂದೇ ಒಂದು ಹೊಸ ಯೋಜನೆ ಜಾರಿಗೆ ತರಲಿಲ್ಲ, ಒಂದೇ ಒಂದು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿಲ್ಲ, ಶೋಷಿತರ ಹಣ ಅನ್ಯ ಕಾರ್ಯಗಳಿಗೆ ಬಳಸಿಕೊಂಡು, ಅಲ್ಪಸಂಖ್ಯಾತರ ಹೆಸರಿನಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಕೇವಲ ಮುಸಲ್ಮಾನರಿಗೆ ಮಾತ್ರ ಮೀಸಲಾತಿ ಕಲ್ಪಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.



ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್,ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ,ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿ ಕುಮಾರ್,ಮಾಜಿ ಸಚಿವ ಬಿ.ಸಿ. ಪಾಟೀಲ್,ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಶಿವರಾಜ್‌ ಸಜ್ಜನ್‌, ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳೀಕೇರಿ, ಮುಖಂಡರಾದ ಭರತ್ ಬೊಮ್ಮಾಯಿ, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು