8:00 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್ ತೊಲಗಿಸಲು ಸಂಕಲ್ಪ

18/04/2025, 20:05

ಕಲಬುರ್ಗಿ(reporterkarnataka.com): ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಬೆಲೆಯೇರಿಕೆ ವಿರುದ್ಧ ಕಲಬುರ್ಗಿಯಲ್ಲಿಂದು ಜನಾಕ್ರೋಶ ಯಾತ್ರೆ ನಡೆಸಲಾಯಿತು.


ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರ್ಭಟಿಸಿತು. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಆಕ್ರೋಶ ಹೊರಹಾಕುವ ಮೂಲಕ ಬಿಜೆಪಿಯ ಜನಪರ ಆಂದೋಲನವನ್ನು ಬೆಂಬಲಿಸಿದ ಪರಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಂಕಲ್ಪ ತೊಟ್ಟಿರುವುದಾಗಿ ಪಕ್ಷದ ನಾಯಕರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,ಮಾಜಿ ಸಚಿವರಾದ ಬಿ. ಶ್ರೀರಾಮುಲು, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ , ರೈತ ಮೋರ್ಚಾ ರಾಜ್ಯಾಧ್ಯಕ್ಷ ಶ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಸಂಸದ ಉಮೆಶ್ ಜಾಧವ್, ಶಾಸಕ ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ,ಡಿ.ಜಿ.ಪಾಟೀಲ್,ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೆಲ್ಕೂರ್, ದತ್ತಾತ್ರೇಯ ಪಾಟೀಲ್ ರೇವೂರ್, ಸುಭಾಷ್ ಗುತ್ತೇದಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಅಶೋಕ್ ಬಗಲಿ, ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಿತಿನ್ ಗುತ್ತೇದಾರ್, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು