10:18 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;…

ಇತ್ತೀಚಿನ ಸುದ್ದಿ

Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್ ತೊಲಗಿಸಲು ಸಂಕಲ್ಪ

18/04/2025, 20:05

ಕಲಬುರ್ಗಿ(reporterkarnataka.com): ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಬೆಲೆಯೇರಿಕೆ ವಿರುದ್ಧ ಕಲಬುರ್ಗಿಯಲ್ಲಿಂದು ಜನಾಕ್ರೋಶ ಯಾತ್ರೆ ನಡೆಸಲಾಯಿತು.


ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರ್ಭಟಿಸಿತು. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಆಕ್ರೋಶ ಹೊರಹಾಕುವ ಮೂಲಕ ಬಿಜೆಪಿಯ ಜನಪರ ಆಂದೋಲನವನ್ನು ಬೆಂಬಲಿಸಿದ ಪರಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಂಕಲ್ಪ ತೊಟ್ಟಿರುವುದಾಗಿ ಪಕ್ಷದ ನಾಯಕರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,ಮಾಜಿ ಸಚಿವರಾದ ಬಿ. ಶ್ರೀರಾಮುಲು, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ , ರೈತ ಮೋರ್ಚಾ ರಾಜ್ಯಾಧ್ಯಕ್ಷ ಶ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಸಂಸದ ಉಮೆಶ್ ಜಾಧವ್, ಶಾಸಕ ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ,ಡಿ.ಜಿ.ಪಾಟೀಲ್,ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೆಲ್ಕೂರ್, ದತ್ತಾತ್ರೇಯ ಪಾಟೀಲ್ ರೇವೂರ್, ಸುಭಾಷ್ ಗುತ್ತೇದಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಅಶೋಕ್ ಬಗಲಿ, ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಿತಿನ್ ಗುತ್ತೇದಾರ್, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು