2:15 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್ ತೊಲಗಿಸಲು ಸಂಕಲ್ಪ

18/04/2025, 20:05

ಕಲಬುರ್ಗಿ(reporterkarnataka.com): ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಬೆಲೆಯೇರಿಕೆ ವಿರುದ್ಧ ಕಲಬುರ್ಗಿಯಲ್ಲಿಂದು ಜನಾಕ್ರೋಶ ಯಾತ್ರೆ ನಡೆಸಲಾಯಿತು.


ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರ್ಭಟಿಸಿತು. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಆಕ್ರೋಶ ಹೊರಹಾಕುವ ಮೂಲಕ ಬಿಜೆಪಿಯ ಜನಪರ ಆಂದೋಲನವನ್ನು ಬೆಂಬಲಿಸಿದ ಪರಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಂಕಲ್ಪ ತೊಟ್ಟಿರುವುದಾಗಿ ಪಕ್ಷದ ನಾಯಕರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,ಮಾಜಿ ಸಚಿವರಾದ ಬಿ. ಶ್ರೀರಾಮುಲು, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ , ರೈತ ಮೋರ್ಚಾ ರಾಜ್ಯಾಧ್ಯಕ್ಷ ಶ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಸಂಸದ ಉಮೆಶ್ ಜಾಧವ್, ಶಾಸಕ ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ,ಡಿ.ಜಿ.ಪಾಟೀಲ್,ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೆಲ್ಕೂರ್, ದತ್ತಾತ್ರೇಯ ಪಾಟೀಲ್ ರೇವೂರ್, ಸುಭಾಷ್ ಗುತ್ತೇದಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಅಶೋಕ್ ಬಗಲಿ, ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಿತಿನ್ ಗುತ್ತೇದಾರ್, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು