11:34 PM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್ ತೊಲಗಿಸಲು ಸಂಕಲ್ಪ

18/04/2025, 20:05

ಕಲಬುರ್ಗಿ(reporterkarnataka.com): ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಬೆಲೆಯೇರಿಕೆ ವಿರುದ್ಧ ಕಲಬುರ್ಗಿಯಲ್ಲಿಂದು ಜನಾಕ್ರೋಶ ಯಾತ್ರೆ ನಡೆಸಲಾಯಿತು.


ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರ್ಭಟಿಸಿತು. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಆಕ್ರೋಶ ಹೊರಹಾಕುವ ಮೂಲಕ ಬಿಜೆಪಿಯ ಜನಪರ ಆಂದೋಲನವನ್ನು ಬೆಂಬಲಿಸಿದ ಪರಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಂಕಲ್ಪ ತೊಟ್ಟಿರುವುದಾಗಿ ಪಕ್ಷದ ನಾಯಕರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,ಮಾಜಿ ಸಚಿವರಾದ ಬಿ. ಶ್ರೀರಾಮುಲು, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ , ರೈತ ಮೋರ್ಚಾ ರಾಜ್ಯಾಧ್ಯಕ್ಷ ಶ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಸಂಸದ ಉಮೆಶ್ ಜಾಧವ್, ಶಾಸಕ ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ,ಡಿ.ಜಿ.ಪಾಟೀಲ್,ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೆಲ್ಕೂರ್, ದತ್ತಾತ್ರೇಯ ಪಾಟೀಲ್ ರೇವೂರ್, ಸುಭಾಷ್ ಗುತ್ತೇದಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಅಶೋಕ್ ಬಗಲಿ, ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಿತಿನ್ ಗುತ್ತೇದಾರ್, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು