7:42 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ ಆರಗ ಜ್ಞಾನೇಂದ್ರ

22/03/2025, 21:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಅನಾವಶ್ಯಕವಾಗಿ ಇವರ ಪ್ರತಿಷ್ಠೆಗಾಗಿ ಬಂದ್ ಕರೆ ಕೊಟ್ಟಿದ್ದಾರೆ. ಯಾರೋ ಎಲ್ಲೋ ಕುತ್ಕೊಂಡು ಮಾಡಿದರೆ ಆಗುತ್ತಾ? ಕರ್ನಾಟಕ ಬಂದ್ ಆಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದರು.
ಮಾಧ್ಯಮದ ಜೊತೆಗೆ ಮಾತನಾಡಿದ ಅವರು ಇವತ್ತು ಎಸ್ ಎಸ್ ಎಲ್ ಸಿ ಪರಿಕ್ಷೆ ಕೂಡ ಇದೆ. ಆ ರೀತಿ ಬಂದಾಗುವುದಿಲ್ಲ, ಆಗಬಾರದು ಕೂಡ. ಯಾರೋ ಪುಂಡರು ಮಾಡುವ ಕೆಲಸಕ್ಕೆ ನಮ್ಮ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ತೊಂದರೆ ಯಾಕೆ ಕೊಡಬೇಕು.
ಬೆಳಗಾವಿಯಲ್ಲಿ ನಾಲ್ಕು ಜನ ಪುಂಡರು ಮಾಡಿರುವ ಕೆಲಸಕ್ಕೆ ಇಡೀ ಮರಾಠ ಸಮುದಾಯ ಮಾಡಿದೆ ಎಂದು ಹೇಳಲು ಆಗುವುದಿಲ್ಲ. ನಮ್ಮ ಕರ್ನಾಟಕದಲ್ಲಿ ಯಾವುದು ನಾಲ್ಕು ಜನ ಕೆಟ್ಟ ಕೆಲಸ ಮಾಡಿದರೆ ಇಡೀ ಕರ್ನಾಟಕ ಮಾಡಿದಂತಾಗುವುದಿಲ್ಲ. ಇದಕ್ಕೆ ಪೊಲೀಸ್ ಅವ್ರು ಆಕ್ಷನ್ ತೆಗೆದುಕೊಳ್ಳಬೇಕಾಗುತ್ತದೆ ಎಂದರು.
ಕರ್ನಾಟಕ ಮತ್ತು ಮಹಾರಾಷ್ಟ್ರ, ಭಾರತ ಮತ್ತು ಪಾಕಿಸ್ತಾನವೇ? ಈ ರೀತಿಯ ಡಿವೈಡ್ ಅಂಡ್ ರೂಲ್ ಮಾಡಬಾರದು. ಯಾರನ್ನು ಒಬ್ಬರನ್ನೊಬ್ಬರು ಎತ್ತಿ ಕಟ್ಟುವ ಕೆಲಸ ಮಾಡಬಾರದು. ಯಾರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಅವರಿಗೆ ಎರಡು ರಾಜ್ಯವು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು