4:54 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ ಆರಗ ಜ್ಞಾನೇಂದ್ರ

22/03/2025, 21:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಅನಾವಶ್ಯಕವಾಗಿ ಇವರ ಪ್ರತಿಷ್ಠೆಗಾಗಿ ಬಂದ್ ಕರೆ ಕೊಟ್ಟಿದ್ದಾರೆ. ಯಾರೋ ಎಲ್ಲೋ ಕುತ್ಕೊಂಡು ಮಾಡಿದರೆ ಆಗುತ್ತಾ? ಕರ್ನಾಟಕ ಬಂದ್ ಆಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದರು.
ಮಾಧ್ಯಮದ ಜೊತೆಗೆ ಮಾತನಾಡಿದ ಅವರು ಇವತ್ತು ಎಸ್ ಎಸ್ ಎಲ್ ಸಿ ಪರಿಕ್ಷೆ ಕೂಡ ಇದೆ. ಆ ರೀತಿ ಬಂದಾಗುವುದಿಲ್ಲ, ಆಗಬಾರದು ಕೂಡ. ಯಾರೋ ಪುಂಡರು ಮಾಡುವ ಕೆಲಸಕ್ಕೆ ನಮ್ಮ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ತೊಂದರೆ ಯಾಕೆ ಕೊಡಬೇಕು.
ಬೆಳಗಾವಿಯಲ್ಲಿ ನಾಲ್ಕು ಜನ ಪುಂಡರು ಮಾಡಿರುವ ಕೆಲಸಕ್ಕೆ ಇಡೀ ಮರಾಠ ಸಮುದಾಯ ಮಾಡಿದೆ ಎಂದು ಹೇಳಲು ಆಗುವುದಿಲ್ಲ. ನಮ್ಮ ಕರ್ನಾಟಕದಲ್ಲಿ ಯಾವುದು ನಾಲ್ಕು ಜನ ಕೆಟ್ಟ ಕೆಲಸ ಮಾಡಿದರೆ ಇಡೀ ಕರ್ನಾಟಕ ಮಾಡಿದಂತಾಗುವುದಿಲ್ಲ. ಇದಕ್ಕೆ ಪೊಲೀಸ್ ಅವ್ರು ಆಕ್ಷನ್ ತೆಗೆದುಕೊಳ್ಳಬೇಕಾಗುತ್ತದೆ ಎಂದರು.
ಕರ್ನಾಟಕ ಮತ್ತು ಮಹಾರಾಷ್ಟ್ರ, ಭಾರತ ಮತ್ತು ಪಾಕಿಸ್ತಾನವೇ? ಈ ರೀತಿಯ ಡಿವೈಡ್ ಅಂಡ್ ರೂಲ್ ಮಾಡಬಾರದು. ಯಾರನ್ನು ಒಬ್ಬರನ್ನೊಬ್ಬರು ಎತ್ತಿ ಕಟ್ಟುವ ಕೆಲಸ ಮಾಡಬಾರದು. ಯಾರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಅವರಿಗೆ ಎರಡು ರಾಜ್ಯವು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು