11:37 PM Sunday23 - March 2025
ಬ್ರೇಕಿಂಗ್ ನ್ಯೂಸ್
IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್… FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?:… Ugadi | ರಾಜಭವನದದಲ್ಲಿ ಚಿಗುರಿದ ‘ಚಂದನ’ದ ‘ಚೈತ್ರಾಂಜಲಿ’: ಗಾಜಿನ ಮನೆಯಲ್ಲಿ ಮೂಡಿ ಬಂತು… Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ… 23.24 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಕರ್ನಾಟಕ ಬಂದ್: ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ BJP MLAS SUSPENDED | ಸ್ಪೀಕರ್ ಪೀಠಕ್ಕೆ ಅಗೌರವ: ಡಾ. ಭರತ್ ಶೆಟ್ಟಿ,… ಹನಿಟ್ರ್ಯಾಪ್ ಪ್ರಕರಣ: ವಿಧಾನ ಸಭೆಯಲ್ಲಿ ಬಿಜೆಪಿ- ಜೆಡಿಎಸ್ ನಿಂದ ಭಾರೀ ಪ್ರತಿಭಟನೆ; ಸ್ಫೀಕರ್… ಅಂಗನವಾಡಿ ಆಹಾರ ಗುಣಮಟ್ಟದ ನಿರ್ಲಕ್ಷ್ಯ ವಹಿಸಿದರೆ ಉಪನಿರ್ದೇಶಕರ ಮೇಲೆ ಕ್ರಮ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ ಆರಗ ಜ್ಞಾನೇಂದ್ರ

22/03/2025, 21:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಅನಾವಶ್ಯಕವಾಗಿ ಇವರ ಪ್ರತಿಷ್ಠೆಗಾಗಿ ಬಂದ್ ಕರೆ ಕೊಟ್ಟಿದ್ದಾರೆ. ಯಾರೋ ಎಲ್ಲೋ ಕುತ್ಕೊಂಡು ಮಾಡಿದರೆ ಆಗುತ್ತಾ? ಕರ್ನಾಟಕ ಬಂದ್ ಆಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದರು.
ಮಾಧ್ಯಮದ ಜೊತೆಗೆ ಮಾತನಾಡಿದ ಅವರು ಇವತ್ತು ಎಸ್ ಎಸ್ ಎಲ್ ಸಿ ಪರಿಕ್ಷೆ ಕೂಡ ಇದೆ. ಆ ರೀತಿ ಬಂದಾಗುವುದಿಲ್ಲ, ಆಗಬಾರದು ಕೂಡ. ಯಾರೋ ಪುಂಡರು ಮಾಡುವ ಕೆಲಸಕ್ಕೆ ನಮ್ಮ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ತೊಂದರೆ ಯಾಕೆ ಕೊಡಬೇಕು.
ಬೆಳಗಾವಿಯಲ್ಲಿ ನಾಲ್ಕು ಜನ ಪುಂಡರು ಮಾಡಿರುವ ಕೆಲಸಕ್ಕೆ ಇಡೀ ಮರಾಠ ಸಮುದಾಯ ಮಾಡಿದೆ ಎಂದು ಹೇಳಲು ಆಗುವುದಿಲ್ಲ. ನಮ್ಮ ಕರ್ನಾಟಕದಲ್ಲಿ ಯಾವುದು ನಾಲ್ಕು ಜನ ಕೆಟ್ಟ ಕೆಲಸ ಮಾಡಿದರೆ ಇಡೀ ಕರ್ನಾಟಕ ಮಾಡಿದಂತಾಗುವುದಿಲ್ಲ. ಇದಕ್ಕೆ ಪೊಲೀಸ್ ಅವ್ರು ಆಕ್ಷನ್ ತೆಗೆದುಕೊಳ್ಳಬೇಕಾಗುತ್ತದೆ ಎಂದರು.
ಕರ್ನಾಟಕ ಮತ್ತು ಮಹಾರಾಷ್ಟ್ರ, ಭಾರತ ಮತ್ತು ಪಾಕಿಸ್ತಾನವೇ? ಈ ರೀತಿಯ ಡಿವೈಡ್ ಅಂಡ್ ರೂಲ್ ಮಾಡಬಾರದು. ಯಾರನ್ನು ಒಬ್ಬರನ್ನೊಬ್ಬರು ಎತ್ತಿ ಕಟ್ಟುವ ಕೆಲಸ ಮಾಡಬಾರದು. ಯಾರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಅವರಿಗೆ ಎರಡು ರಾಜ್ಯವು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು