3:31 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಜೂನ್ 20ರಂದು  ‘ಬ್ಯಾರಿ ಅರ್ಚೊ ಮಸಾಲೆ 2021’ ಬ್ಯಾರಿ ಸಂಗೀತ ಕಾರ್ಯಕ್ರಮ

18/06/2021, 18:17

ಮಂಗಳೂರು(reporterkarnataka news): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ದಿಗ್ಗಜರಾದ ದಿವಂಗತ ಇಬ್ರಾಹಿಂ ತಣ್ಣೀರುಬಾವಿ ಅವರ ನೆನಪಿಗಾಗಿ ‘ಬ್ಯಾರಿ ಅರ್ಚೊ ಮಸಾಲೆ 2021’ ಬ್ಯಾರಿ ಸಂಗೀತ ಲೈವ್ ಕಾರ್ಯಕ್ರಮವನ್ನು  ಅಕಾಡೆಮಿಯ ಯೂಟ್ಯೂಬ್ ಮತ್ತು ಫೇಸ್ ಬುಕ್ ಚಾನೆಲ್ ಮುಖಾಂತರ ಜೂನ್ 20ರಂದು ರಾತ್ರಿ  7 ಗಂಟೆಯಿಂದ 10 ಗಂಟೆಯವರೆಗೆ ಪ್ರಸಾರ ಮಾಡಲಿದೆ. 

ಬ್ಯಾರಿ ಭಾಷೆಯ ಪ್ರಸಿದ್ದ ಗಾಯಕರಾದ ಅನಿತಾ ಡಿಸೋಜಾ, ಮುಹಮ್ಮದ್ ಇಕ್ಬಾಲ್, ಹುಸೈನ್ ಕಾಟಿಪಳ್ಳ, ಅಶ್ರಫ್ ಅಪೋಲೊ, ಶರೀಫ್ ಪರ್ಲಿಯಾ, ಮತ್ತು ಫೈಝ್ ಕಾಟಿಪಳ್ಳ ಇವರು ಭಾಗವಹಿಸಲಿದ್ದಾರೆ. 

ಲಾಕ್ ಡೌನ್ ಆದ ಹಿನ್ನಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಗೀತ ಪ್ರಿಯರು ಬಯಸುತ್ತಿದ್ದು, ಈ ಬಗ್ಗೆ ನಿರಂತರವಾಗಿ ಬೇಡಿಕೆಗಳು ಬಂದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು  ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್  ತಿಳಿಸಿದ್ದಾರೆ.  ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶಂಶೀರ್ ಬುಡೋಳಿ ಅವರು ಕಾರ್ಯನಿರ್ವಹಿಸಲಿದ್ದಾರೆ. ಪ್ರತಿಯೊಬ್ಬರು ಈ ಕಾರ್ಯಕ್ರಮವನ್ನು ಮನೆಯಲ್ಲಿ ಕುಳಿತು ವೀಕ್ಷಿಸಬೇಕಾಗಿ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು