9:10 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್ ಬಿಲ್ , ದಂಡ ಎರಡೂ ಮನ್ನಾ: ಮುಖ್ಯಮಂತ್ರಿ

08/05/2025, 23:07

ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು: ಸಿಎಂ

ನೂತನ ಹಾಸ್ಟೆಲ್ ಕೇವಲ‌ ಕುರುಬರ ಮಕ್ಕಳಿಗೆ ಮಾತ್ರವಲ್ಲ, ಎಲ್ಲಾ ಜಾತಿಯ ಬಡವರಿಗೂ ಅವಕಾಶ ಇರುತ್ತದೆ: ಸಿಎಂ

ಮಂಡ್ಯ(reporterkarnataka.com): ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲ್ಲೂಕು ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಹಾಸ್ಟೆಲ್ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ನೂತನ ಹಾಸ್ಟೆಲ್ ಕೇವಲ‌ ಕುರುಬರ ಮಕ್ಕಳಿಗೆ ಮಾತ್ರವಲ್ಲ, ಎಲ್ಲಾ ಜಾತಿಯ ಬಡವರಿಗೂ ಅವಕಾಶ ಇರುತ್ತದೆ ಎಂದರು.
ದಾನಿಗಳು ಕೊಟ್ಟಷ್ಟು ಕೊಡಲಿ. ನಾನೂ ಸಹಾಯ ಮಾಡುತ್ತೇನೆ. ಮಂಡ್ಯದ ಜನ ಹತ್ತಾರು ವರ್ಷಗಳಿಂದ ನನಗೆ ಬಂಬಲ ಕೊಡುತ್ತಲೇ ಬರುತ್ತಿದ್ದಾರೆ ಎಂದರು.
ನಾಲ್ವಡಿ ಅರಸರನ್ನು ನಾವು ಸದಾ ಸ್ಮರಿಸಬೇಕು. ಮಂಡ್ಯದ ಪ್ರಗತಿಯಲ್ಲಿ ಇವರ ಕೊಡುಗೆ ಅಪಾರ ಎಂದು ಅವರು ನುಡಿದರು.
ನಮ್ಮ ಸರ್ಕಾರ ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್ ಬಿಲ್ , ದಂಡ ಎರಡನ್ನೂ ಮನ್ನಾ ಮಾಡಿದ್ದೇವೆ ಎಂದರು.
ನಾನು ಮಂಡ್ಯದ ಈ ಹಾಸ್ಟೆಲ್ ಕಟ್ಟಡ ಶಿಥಿಲ ಆಗಿದ್ದನ್ನು ನೋಡಿದ್ದೆ. ಅನುದಾನ ಕೊಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದ್ದೆ. ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶ ಈಡೇರಬೇಕಾದರೆ ಹಾಸ್ಟೆಲ್ ಗಳ ಅಗತ್ಯವಿದೆ. ಹಳ್ಳಿಗಾಡಿನ ಮಕ್ಕಳೂ ವೈದ್ಯರು, ಎಂಜಿನಿಯರ್ ಗಳಾಗಬೇಕು. ಕೇವಲ ಒಂದು ವರ್ಗದವರು ಮಾತ್ರ ಆಗಬಾರದು, ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂದು ಅವರು ಹೇಳಿದರು.
ಇವತ್ತೇನಾದರೂ ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆ ಉಳಿದಿದ್ದರೆ, ವೈದ್ಯ ಕಾಲೇಜು, ಕೃಷಿ ವಿವಿ ಬಂದಿದೆ ಎಂದರೆ ಅದಕ್ಕೆ ಕಾಂಗ್ರೆಸ್ ಸರ್ಕಾರದ ಸಚಿವ ಚಲುವರಾಯಸ್ವಾಮಿ ಅವರ ಕಾಳಜಿ, ಶ್ರಮ ಕಾರಣ ಎಂದು ಸ್ಪಷ್ಟಪಡಿಸಿದರು.


ಕಳೆದ ವರ್ಷ ಮಳೆ-ಬೆಳೆ ಚನ್ನಾಗಿ ಆಗಿದೆ. ಸಿದ್ದರಾಮಯ್ಯ ಅವರ ಕಾಲಗುಣ ಸರಿ ಇಲ್ಲ ಎಂದು ಟೀಕಿಸುತ್ತಿದ್ದ ಬಿಜೆಪಿ-ಜೆಡಿಎಸ್ ನವರಿಗೆ ಮಳೆಯೇ ಉತ್ತರ ಕೊಟ್ಟಿದೆ. ಈ ವರ್ಷವೂ ಉತ್ತಮ ಮಳೆ ಬೆಳೆ ಆಗುವ ಭರವಸೆ ಇದೆ ಎಂದರು.
ಬಿಜೆಪಿ ನಿರಂತರವಾಗಿ ಸುಳ್ಳು ಹೇಳಿಕೊಂಡು ತಿರುಗುತ್ತಿದೆ. ಸರ್ಕಾರದ ಬೊಕ್ಕಸ ಖಾಲಿ ಎನ್ನುತ್ತಿದ್ದಾರೆ. ಒಂದು ಲಕ್ಷದ 35 ಸಾವಿರ ಕೋಟಿ ರೂಪಾಯಿಯನ್ನು ಅಭಿವೃದ್ಧಿಗೆ ತೆಗೆದಿರಿಸಿದ್ದೇವೆ. ಇದು ಜನರಿಗೆ ಕಾಣುತ್ತದೆ, ಬಿಜೆಪಿಯವರಿಗೆ ಕಾಣುತ್ತಿಲ್ಲ ಎಂದು ಅವರು ಖೇದ ವ್ಯಕ್ತಪಡಿಸಿದರು.
ಯಾರ್ಯಾರು ಅಕ್ಷರ ಸಂಸ್ಕೃತಿ ಮತ್ತು ಸಾಮಾಜಿಕ ಅವಕಾಶಗಳಿಂದ ವಂಚಿತರಾಗಿದ್ದಾರೋ ಅವರೆಲ್ಲರ ಪರವಾಗಿ ನಮ್ಮ ಸರ್ಕಾರ ಇರುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು