1:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕರ್ನಾಟಕದಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

01/04/2022, 10:28

ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ಅವಧಿಗೆ ಪೂರ್ವ ಚುನಾವಣೆಗೆ ಹೋಗುವ ಯಾವುದೇ ಯೋಚನೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ಗುಜರಾತ್ ಚುನಾವಣೆಯ ಜೊತೆಗೆ ಕರ್ನಾಟಕದ ಚುನಾವಣೆಯೂ ನಡೆಯಲಿದೆ . ಬೊಮ್ಮಾಯಿ ಸರ್ಕಾರ ಅವಧಿಗೆ ಪೂರ್ಣ ಚುನಾವಣೆಗೆ ಹೋಗುತ್ತದೆ ಎಂಬುವುದು ಕೇವಲ ಊಹಾಪೋಹಗಳು ಎಂದು ಅವರು ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರುವ ಹಿನ್ನೆಲೆ ರಾಜ್ಯಕ್ಕೆ ಬಂದಿರುವ ಅರುಣ್ ಸಿಂಗ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಆಲೋಚನೆಯೂ ಇಲ್ಲ. ಸದ್ಯ ಯಾವ ರೀತಿಯಲ್ಲಿ ಇದೆಯೋ ಅದೇ ಮಾದರಿಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಸ್ಪಷ್ಟಪಸಿದರು.

ರಾಜ್ಯದಲ್ಲಿ ಬಿಜೆಪಿ ನಾಯಕರು ಲೋಕಪ್ರಿಯರಿದ್ದಾರೆ, ಜನಪ್ರಿಯರಿದ್ದಾರೆ. ಬೊಮ್ಮಾಯಿಯವರು ತಮ್ಮ ಆಡಳಿತ ವೈಖರಿಯಿಂದ ಹೆಸರು ಮಾಡಿದ್ದಾರೆ. ಈ‌ ಆಧಾರದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದರು.

ರಾಹುಲ್‌ಗಾಂಧಿ ಧೈರ್ಯ ಮೆಚ್ಚಬೇಕು.ರಾಹುಲ್ ಗಾಂಧಿ ರಾಜ್ಯ ಭೇಟಿ ಕುರಿತು ಮಾತನಾಡಿದ ಅರುಣ್‌ಸಿಂಗ್, ದೇಶಾದ್ಯಂತ ಕಾಂಗ್ರೆಸ್ ಸೋಲುತ್ತಿದೆ. ಈ ಬಾರಿ ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟ ಬುತ್ತಿ. ಸೋಲಾಗುತ್ತೆ ಅಂತ ಗೊತ್ತಿದ್ದರೂ ರಾಹುಲ್ ಗಾಂಧಿ ಇಲ್ಲಿಗೆ ಬರೋ ಧೈರ್ಯ ತೋರಿಸಿರೋದು ಮೆಚ್ಚಬೇಕಾದದ್ದೇ ಎಂದು ವ್ಯಂಗ್ಯವಾಡಿದರು.

ಬಹಳ ಧೈರ್ಯದಿಂದ ರಾಹುಲ್ ಗಾಂಧಿ ಇಲ್ಲಿಗೆ ಬಂದಿದ್ದಾರೆ. ಅವರು ಬಂದು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿ. ಆದರೆ, ಅವರ ನೇತೃತ್ವದಲ್ಲಿ ಯಾವುದೂ ನೆಟ್ಟಗೆ ನಡೀತಿಲ್ಲ, ಅವರಿಂದ ಹೊಸದೇನನ್ನೂ ಮಾಡುವುದಕ್ಕೆ ಆಗುತ್ತಿಲ್ಲ. ಕಾಂಗ್ರೆಸ್ ದೇಶದಲ್ಲಿ ಎಲ್ಲಾ ಕಡೆ ಸೋಲುತ್ತದೆ. ಅದರಂತೆ ಮುಂದೆ ಕರ್ನಾಟಕದಲ್ಲಿಯೂ ಸೋಲುತ್ತದೆ ಎಂದು ಭವಿಷ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು