2:35 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

New Delhi | ಗ್ಯಾರೆಂಟಿ ನೆಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಲಹುವ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

03/06/2025, 20:38

ನವದೆಹಲಿ(reporterkarnataka.com): ರಾಜ್ಯ ಕಾಂಗ್ರೆಸ್‌ ಸರ್ಕಾರ, ಗ್ಯಾರೆಂಟಿ ನೆಪದಲ್ಲಿ ತನ್ನ ಕಾರ್ಯಕರ್ತರನ್ನು ಸಲಹುತ್ತಿದೆ ಅಷ್ಟೇ! ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ಗ್ಯಾರೆಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಮೂರು ತಿಂಗಳಿಂದಲೂ ಮಹಿಳೆಯರಿಗೆ ʼಗೃಹಲಕ್ಷ್ಮಿʼ ಹಣ ನೀಡಿಲ್ಲ. ಆದರೆ, ಗ್ಯಾರೆಂಟಿ ಅನುಷ್ಠಾನ ಸಮಿತಿಗೆ ಮಾತ್ರ 3 ತಿಂಗಳ ಮುಂಗಡ ಭತ್ಯೆ ಬಿಡುಗಡೆಗೆ ಆದೇಶಿಸಿದೆ ಎಂದು ಆರೋಪಿಸಿದ್ದಾರೆ.

*ಕಾಂಗ್ರೆಸ್ಸಿಗರಿಗೆ ʼಗೃಹಲಕ್ಷ್ಮಿʼ ವರ:* ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿ ಸ್ಕೀಂಗಳು ಆ ಪಕ್ಷದ ಕಾರ್ಯಕರ್ತರಿಗೆ ಆದಾಯದ ಮೂಲವಾಗಿವೆ. ʼಗೃಹಲಕ್ಷ್ಮಿʼ ನಿಜಕ್ಕೂ ಆ ಪಕ್ಷದವರಿಗೆ ವರದಾನವಾಗಿದೆ, ವರಮಾನ ತರುವ ಯೋಜನೆಯಾಗಿದೆ ಎಂದಿದ್ದಾರೆ.

*ಅನುಷ್ಠಾನ ಸಮಿತಿಗೆ ಮುಂಗಡ ಸಂಬಳವೇ?:* ಕಾಂಗ್ರೆಸ್‌ ನಾಯಕರು ಅಧಿಕಾರಕ್ಕೆ ಬರುವ ಮುನ್ನ ʼಮಹಿಳೆಯರಿಗೆ ಪ್ರತಿ ತಿಂಗಳು ₹2,000 ಟಕಾಟಕ್ ಹಾಕೇಬಿಡ್ತೀವಿʼ ಎಂದರು. ಆದರೆ, ಮೂರ್ನಾಲ್ಕು ತಿಂಗಳುಗಟ್ಟಲೇ ಹಾಕದೆ ಸತಾಯಿಸುತ್ತಿದೆ. ಪ್ರಶ್ನಿಸಿದರೆ ಅದೇನು ಸಂಬಳವೇ? ಎನ್ನುತ್ತಾರೆ. ಹಾಗಾದರೆ ಗ್ಯಾರೆಂಟಿ ಅನುಷ್ಠಾನ ಸಮಿತಿಗೆ ಕೊಡುತ್ತಿರುವುದೇನು? ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.

*ಗ್ಯಾರೆಂಟಿ ಸಮಿತಿಗೇಕೆ ಮುಂಗಡ ಭತ್ಯೆ?:* ಮಹಿಳೆಯರಿಗೆ ಪ್ರತಿ ತಿಂಗಳು ಕೊಡಲು ಹಣವಿಲ್ಲ. ಆದರೆ, ಗ್ಯಾರೆಂಟಿ ಅನುಷ್ಠಾನ ಸಮಿತಿಗೆ ಒಟ್ಟಿಗೇ 5 ತಿಂಗಳು (3 ತಿಂಗಳು ಮುಂಗಡ) ಭತ್ಯೆಯಾಗಿ ₹7.65 ಕೋಟಿ ಬಿಡುಗಡೆ ಮಾಡಿದೆ. ರಾಜ್ಯದ ಜನರಿಗೆ ಮಾತ್ರ ಆಗಸ ತೋರಿಸಿ ಮಂಕುಬೂದಿ‌ ಎರಚುತ್ತಿದೆ ಎಂದು ಆರೋಪಿಸಿದ್ದಾರೆ.

ಸಚಿವ‌ ಸತೀಶ್ ಜಾರಕಿಹೊಳಿ ʼಪ್ರತಿ ತಿಂಗಳು ‌ಗೃಹಲಕ್ಷ್ಮಿ ಹಣ ಕೊಡದಿದ್ರೆ ಆಕಾಶ ಏನೂ ಕಳಚಿ ಬೀಳಲ್ಲ’ ಎಂಬ ದುರಹಂಕಾರದ ಮಾತನಾಡುತ್ತಿದ್ದಾರೆ. ಮತ್ತೆ ಕೆಲವರು ಅದೇನು ಸಂಬಳವೇ? ಎಂದು ಪ್ರತಿಕ್ರಿಯಿಸಿದರು. ಹಾಗಾದರೆ ಗ್ಯಾರೆಂಟಿ ಸಮಿತಿಯಲ್ಲಿರುವ ಕಾಂಗ್ರೆಸ್‌ ಮುಖಂಡರಿಗೆ, ಕಾರ್ಯಕರ್ತರಿಗೆ ಮುಂಗಡ ಭತ್ಯೆಗೆ ಆದೇಶ ಕೊಟ್ಟಿದ್ದಾರಲ್ಲ ಇದೇನು? ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.

*₹ 7200 ಕೋಟಿ ಬಾಕಿ:* ರಾಜ್ಯದ 1.25 ಕೋಟಿ ಮಹಿಳೆಯರಿಗೆ ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಹಣ ಸಂದಾಯವಾಗಿಲ್ಲ. ಅಂದಾಜು ₹7200 ಕೋಟಿ ಹಣ ಬಿಡುಗಡೆ ಬಾಕಿ ಉಳಿಸಿಕೊಂಡಿದೆ. ಖಜಾನೆ ಪೂರ್ತಿ ಖಾಲಿ ಮಾಡಿದೆ ಎಂದು ಜೋಶಿ ಟೀಕಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಶ್ರೀಸಾಮಾನ್ಯರನ್ನು ಕಡೆಗಣಿಸಿದ್ದು, ತನ್ನ ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ಮುಂಗಡ ಭತ್ಯೆ ನೀಡಿ ಅವರನ್ನು ಸಲಹುತ್ತಿದೆ. ಕಾಂಗ್ರೆಸ್ ಸರ್ಕಾರ ದುರಾಡಳಿತ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು