7:53 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕರ್ನಾಟಕ ಜಂಗಲ್ ರಾಜ್ ಆಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ

16/01/2025, 18:48

ಬೆಂಗಳೂರು(reporterkarnataka.com): ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ‌ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದೇ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಬೀದರನಲ್ಲಿ ಹಾಡ ಹಗಲೇ ಎಟಿಎಂಗೆ ಹಣ ತುಂಬಲು ಬಂದವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದು ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ. ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದು, ಸರ್ಕಾರಕ್ಕೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಪೊಲಿಸರಿಗೆ ಕ್ರಿಮಿನಲ್ ಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದ್ದು, ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ ಎಂದು ಎಚ್ಚರಿಸಿದ್ದಾರೆ.
*ತುಂಗಭದ್ರಾ ನೀರು ಪರೀಕ್ಷೆಗೆ ಆಗ್ರಹ:*
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ತುಂಗಭದ್ರಾ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು ಸುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ. ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಲು ಹೊರಗಡೆಯಿಂದ ಕಲುಷಿತ ನೀರು ಅಥವಾ ರಸಾಯನಿಕ ನದಿಗೆ ಸೇರ್ಪಡೆಯಾಗುತ್ತಿರುವ ಕುರಿತು ಜಿಲ್ಲಾಡಳಿತ ತಕ್ಷಣೆ ಪತ್ತೆ ಹಚ್ಚುವ ಕೆಲಸ ಮಾಡಬೇಕು.
ಜಿಲ್ಲಾಧಿಕಾರಿಗಳು ಕೂಡಲೇ ನೀರನ್ನು ತಪಾಸಣೆಗೆ ಕಳುಹಿಸಿಕೊಡಬೇಕು. ಅಲ್ಲದೇ ನದಿಯ ನೀರನ್ನು ಯಾರೂ ಜನ ಜಾನುವಾರುಗಳಿಗೆ ಬಳಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು