1:08 AM Tuesday11 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಕಂಪ್ಲಿ ತಾಲೂಕು ಉಪಾಧ್ಯಕ್ಷರಾಗಿ ದೊಡ್ಡ ಬಸವರಾಜ್ ಬಡಗಿ ನೇಮಕ

12/10/2022, 23:34

ಬೆಂಗಳೂರು(reporterkarnataka.com) : ರಾಜ್ಯದ ವಿಸ್ಮಯ ವಾಣಿ ಪತ್ರಿಕೆಯ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ವರದಿಗಾರರು ದೊಡ್ಡ ಬಸವರಾಜ್ ಬಡಗಿ ಅವರನ್ನು “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ” ಸಂಘಟನೆಯ ಬಳ್ಳಾರಿ ಜಿಲ್ಲಾ ಕಂಪ್ಲಿ ತಾಲೂಕಿನ ಉಪಾಧ್ಯಕ್ಷರಾಗಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ನೇಮಿಸಿದ್ದಾರೆ.

ದೊಡ್ಡ ಬಸವರಾಜ್ ಬಡಗಿ ಅವರು ಕಳೆದ
ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಪತ್ರಕರ್ತರಾಗಿ
ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ವಿಸ್ಮಯ ವಾಣಿ ಸೇರಿದಂತೆ ರಾಜ್ಯದ ಹಲವಾರು ಪತ್ರಿಕೆಗಳಿಗೆ ವರದಿಗಳು ಕೊಡುತ್ತಾ ಇದ್ದರು ಮತ್ತು ವಿಸ್ಮಯ ವಾಣಿ ಪತ್ರಿಕೆಯ ವರದಿಗಾರರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ.

ಕಳೆದ ವರ್ಷಗಳಿಂದ ತಮ್ಮದೇ ಸಮಾಜ ಸೇವೆ ಕ್ಷೇತ್ರದಲ್ಲಿ ಮತ್ತು ದಲಿತ ಸಂಘದ ದಲಿತ ಪರ ಗ್ರಾಮದ ಹಳ್ಳಿಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳ ಸಲುವಾಗಿ ಹೊರಾಟ ಮಾಡಿದ್ದಾರೆ. ಅವರ ಪರಿಣಾಮಕಾರಿ ವರದಿಗಳು ಓದುಗರ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ಎಂಟು ತಿಂಗಳ ಹಿಂದೆ “ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸಂಘ” ವನ್ನು ಸ್ಥಾಪಿಸಿ ಸಾಕಷ್ಟು ಜನಪ್ರಿಯ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರ ಮನಮುಟ್ಟುವಲ್ಲಿ ಸಫಲರಾಗಿದ್ದಾರೆ.

ಇವರ ಅಮೂಲಾಗ್ರ ಸಂಘಟನಾತ್ಮಕ ಸೇವೆಯನ್ನು ಗಮನಿಸಿ “ಕರ್ನಾಟಕ ವರ್ಕಿಂಗ್ ಜರ್ನಲಿಸ್ಟ್ ವಾಯ್ಸ್ ಸಂಘಟನೆಯ ಕಂಪ್ಲಿ ತಾಲೂಕಿನ ಉಪಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನರವರು ನೇಮಕಮಾಡಿದ್ದಾರೆ. ತಮ್ಮ ಅವಧಿಯಲ್ಲಿ ಪತ್ರಕರ್ತರರನ್ನು ಸಂಘಟಿಸುವುದರ ಜೊತೆಯಲ್ಲಿ ಅವರ ಮೂಲಭೂತ ಹಕ್ಕುಗಳು ಹಾಗೂ ಅವರು ಕಾರ್ಯ ನಿರ್ವಹಿಸುವಾಗ ಎದುರಾಗುವ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎಂದು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು