1:55 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕರ್ನಾಟಕ- ಕೇರಳ ರಾಜ್ಯ ಹೆದ್ದಾರಿ 36: ಗುಂಡಿಗಳದ್ದೇ ದರ್ಬಾರ್!; ಒಂದು ತಾಸಿನ ಪ್ರಯಾಣಕ್ಕೆ ಬೇಕು 2 ಗಂಟೆ!!

01/07/2025, 11:32

ಗಿರಿಧರ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಮತ್ತು ಕೇರಳ ನಡುವೆ ಸಂಪರ್ಕ ಕಲ್ಪಿಸುವ ಮಾಕುಟ್ಟ(ಕರ್ನಾಟಕ )-ಕಣ್ಣೂರು (ಕೇರಳ ) ನಡುವಿನ SH-36 ಸಾಕ್ಷಾತ್ ನರಕದ ದರ್ಶನ ತೋರುತ್ತಿದೆ, ಪೆರಂಬಾಡಿ ಯಿಂದ ಮಾಕುಟ್ಟ ತೆರಳುವ ಕಡಿದಾದ ದಾರಿಯಲ್ಲಿ ರಸ್ತೆಯನ್ನು ಹುಡುಕಿಕೊಂಡು ವಾಹನಗಳು ಸಂಚಾರ ಮಾಡುವ ಅನಿವಾರ್ಯತೆ ಉಂಟಾಗಿದೆ.
ಕೊಡಗು ಜಿಲ್ಲೆಗೆ ಕಣ್ಣೂರು ಎರ್ಪೋರ್ಟ್ ಸಮೀಪದಲ್ಲೇ ಇದ್ದರೂ ಇಲ್ಲಿಗೆ ತೆರಳುವುದಕ್ಕೆ ಒಂದು ಗಂಟೆ ಸಂಚಾರಕ್ಕೆ, ಹೆಚ್ಚುವರಿ1 ಗಂಟೆ ಅಧಿಕ ತಗಲುತ್ತಿದೆ, ಇನ್ನೂ ಅಪಘಾತ, ಜೋರು ಮಳೆ ಇದ್ದಾರಂತೂ ಒಮ್ಮೆ ಗಡಿ ದಾಟಿದರೆ ಸಾಕು ಎನ್ನುವಷ್ಟರ ಮಟ್ಟಿಗೆ ಹರಸಾಹಸ ಪಡಬೇಕಾದ ಅನಿವಾರ್ಯ ಇದೆ. ದಿನನಿತ್ಯ ಕೇರಳ ದಿಂದ ಆಗಮಿಸುವ ಪ್ರವಾಸಿಗರು, ಸರಕು, ಹಣ್ಣು ತರಕಾರಿ ಸಾಗಿಸುವ ವಾಹನಗಳು ಅಂತೂ ಹಿಡಿಶಾಪ ಹಾಕ್ಕೊಂಡೆ ಸಂಚಾರಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು