6:22 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ 1402 ಕೋಟಿ ರೂ.ಚೆಕ್ ಸಿಎಂಗೆ ಹಸ್ತಾಂತರ

14/03/2025, 23:02

ಬೆಂಗಳೂರು (reporterkarnataka.com): ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸರ್ಕಾರದ ಮಾಲೀಕತ್ವದ ಸಾರ್ವಜನಿಕ ಉದ್ದಿಮೆ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮವು ( ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿತು.
ವಿಧಾನಸೌಧದಲ್ಲಿಂದು ರೋಣ ಕ್ಷೇತ್ರದ ಶಾಸಕ ಹಾಗೂ ನಿಗಮದ ಅಧ್ಯಕ್ಷರಾಗಿರುವ ಜಿ.ಎಸ್.ಪಾಟೀಲ‌್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ ಹಸ್ತಾಂತರ ಮಾಡಿದರು.
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯು 2023-24ನೇ ಸಾಲಿನಲ್ಲಿ ರೂ.1403.58 ಕೋಟಿಗಳ ವಹಿವಾಟು ನಡೆಸಿ ರೂ.867.33 ಕೋಟಿ ತೆರಿಗೆ ಪೂರ್ವ ಲಾಭ ಹಾಗೂ ರೂ.643.20 ಕೋಟಿ ತೆರಿಗೆ ನಂತರದ ಲಾಭ ಗಳಿಸಿದೆ.
2023-24ನೇ ಸಾಲಿನಲ್ಲಿ ಗಳಿಸಿರುವ ನಿವ್ವಳ ಲಾಭದ (Net profit) ಮೇಲೆ ಷೇರುದಾರರಿಗೆ ಅಂದರೆ ಸರ್ಕಾರಕ್ಕೆ ಶೇಕಡಾ 30 ಲಾಭಾಂಶ 191.43 ಕೋಟಿ ರೂ. ಹಾಗೂ ಆರ್ಥಿಕ ಇಲಾಖೆಯ 15.07.2024ರ ಆದೇಶದನ್ವಯ ಶೇಕಡಾ 30 ರಷ್ಟು ವಿಶೇಷ ಲಾಭಾಂಶ 1195.63 ಕೋಟಿ ರೂ.ಗಳನ್ನು
ನೀಡಲು ನಿಗಮದ 58ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅನುಮೋದಿಸಲಾಗಿತ್ತು.ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆಯವ್ಯಯದಲ್ಲಿ ನಿಗದಿಪಡಿಸಲಾಗಿರುವ 15 ಕೋಟಿ ರೂ.ಸೇರಿ ಒಟ್ಟು 1402 ಕೋಟಿ ರೂ.ಗಳ ಚೆಕ್ ಮತ್ತು ಡಿ.ಡಿ.ಗಳನ್ನು ಇಂದು ಹಸ್ತಾಂತರ ಮಾಡಲಾಯಿತು. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಮಣದೀಪ್ ಚೌಧರಿ, ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಹಾಗೂ ನಿಗಮದ ಅಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು