4:50 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕರ್ನಾಟಕ ಸ್ಟೈಲ್ ಐಕಾನ್ 2021 ಸ್ಪರ್ಧೆ: ವಿಜಯಪುರದ ದೀಕ್ಷಾ ಸೆಕೆಂಡ್ ರನ್ನರ್ ಅಪ್ 

03/12/2021, 14:08

ವಿಜಯಪುರ(reporterkarnataka.com): ಫ್ಯಾಶನ್ ಪ್ಯಾರಿಸ್ ನಲ್ಲಿ ಹುಟ್ಟಿದ್ರೆ ವಿಜಯಪುರದಲ್ಲಿ ಕೊನೆಗೊಳ್ಳುತ್ತದೆ ಎಂಬ ಕುಹಕದ ಮಾತಿತ್ತು. ಆದರೆ ಈ ಮಾತನ್ನು ಬುಡಮೇಲು ಮಾಡಲಾಗಿದೆ. ವಿಜಯಪುರದ ದೀಕ್ಷಾ ಭೀಸೆ ಅವರು ಕರ್ನಾಟಕ ಸ್ಟೈಲ್ ಐಕಾನ್ 2021ರ ಸೆಕೆಂಡ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.


ಮುಂಬೈನ ಬೋರೆಗಾಂವನಲ್ಲಿ ನಡೆದ ಮಿಸ್ ಕರ್ನಾಟಕ ಸ್ಟೈಲ್ ಐಕಾನ್ 2021ರಲ್ಲಿ ವಿಜಯಪುರದ ದೀಕ್ಷಾ ಭೀಸೆರವರು ಪಾಲ್ಗೊಂಡಿದ್ದರು. ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಇದೀಗ ಅವರು ಪ್ರಶಸ್ತಿ ಬಾಚಿಕೊಂಡು ವಿಜಯಪುರ ಮಾತ್ರವಲ್ಲದೆ ಇಡೀ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ.

ಸುಮಾರು ಒಂದು ವಾರಗಳ ತರಬೇತಿಯ ನಂತರ ಆತ್ಮವಿಶ್ವಾಸದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ ದೀಕ್ಷಾ ಭೀಸೆರವರು ನಡೆ-ನುಡಿ-ಭಾವ ಶುದ್ಧತೆಯಲ್ಲಿ ಎಲ್ಲರ ಮನಗೆದ್ದರು. ದಕ್ಷಿಣ ಕರ್ನಾಟಕ ಮತ್ತು
ಮುಂಬೈ ವಲಸಿಗ ಕನ್ನಡಿಗರೇ ತುಂಬಿದ್ದ.ಈ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆಲ್ಲುವುದು ಕನಸಿನ ಮಾತು. ಆದರೆ ದೀಕ್ಷಾ.ಭೀಸೆರವರು ಸಾಧನೆ ಮಾಡಿ ಇದೀಗ ನಾಡಿನ ಗಮನ ಸೆಳೆದಿದ್ದಾರೆ. ಉತ್ತರ ಕರ್ನಾಟಕದ ಯುವತಿಯರಿಗೆ ಸ್ಫೂರ್ತಿಯಾಗಿದ್ದಾರೆ.

ಪ್ರಶಸ್ತಿ ಪಡೆದ ಬಳಿಕ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ದೀಕ್ಷಾ ಅವರು “ನಮ್ಮ ಭಾಗದ ಹೆಣ್ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸೋದು ತುಂಬಾ ವಿರಳ. ಹೆಣ್ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು