1:00 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು…

ಇತ್ತೀಚಿನ ಸುದ್ದಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ‘ದೀಪಾವಳಿ ಪರ್ವದ ಐಸಿರ’ ಕಾರ್ಯಕ್ರಮ

21/10/2025, 19:36

ಮಂಗಳೂರು:(reporterkarnataka.com):ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಯೋಗದಲ್ಲಿ ದೀಪಾವಳಿ ಪರ್ಬದ ಐಸಿರ, ಪಾತೆರಕತೆ, ಕಬಿಗೋಷ್ಠಿ, ನೃತ್ಯ ಸಂಭ್ರಮ, ಪದರಂಗಿತ ಕಾರ್ಯಕ್ರಮ ಬಲ್ಮಠ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜರಗಿತು.


ಕಾರ್ಯಕ್ರಮವನ್ನು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ. ಕಿಶೋರ್ ಕುಮಾರ್ ರೈ ಶ್ರೇಣಿ ಉದ್ಘಾಟಿಸಿ ಮಾತನಾಡಿ, ತುಳುನಾಡಿನ ಬೆಳಕಿನ ಹಬ್ಬ ಪ್ರಕೃತಿ ಆರಾಧನೆಯನ್ನು ಒಳಗೊಂಡಿದೆ. ಇಂದಿನ ಮಕ್ಕಳಿಗೆ ನಮ್ಮ ಆಚರಣೆಗಳ ಬಗ್ಗೆ ಅರಿವು ಮೂಡಿಸುವ ಶಿಕ್ಷಣ ನೀಡಬೇಕು. ಹಂಡೆ ತುಂಬಿಸಿ, ಅಲಂಕರಿಸಿ, ಎಣ್ಣೆ ಹಚ್ಚಿ ಸ್ನಾನ ಮಾಡುವ ಮೂಲಕ ಆರಂಭಗೊಳ್ಳುವ ಹಬ್ಬದ ಗೋಪೂಜೆ ಸೇರಿದಂತೆ ಬಲಿಯೇಂದ್ರನನ್ನು ಕರೆಯುವ ವಿಶೇಷ ಆಚರಣೆಗಳ‌ ಮೂಲಕ ತನ್ನದೇ ಪ್ರಾಮುಖ್ಯೆ ಪಡೆದುಕೊಂಡಿದೆ ಎಂದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಧರ್ಮಗಳು ಹಿಂದಿನಂತೆ ಒಟ್ಟಾಗಿ ಇರಬೇಕು
ಹಬ್ಬಗಳು ಪ್ರಕೃತಿ ಯ ನೆಲೆಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಬೆಸೆದಿರುತ್ತದೆ. ಹಬ್ಬಗಳು ಎಂದರೆ ಎಲ್ಲರನ್ನೂ ಒಟ್ಟುಗೂಡಿಸುವುದಾಗಿದೆ ಎಂದರು.

ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ ಬಾಳ ಗೌರವ ಉಪಸ್ಥಿತಿ ವಹಿಸಿದ್ದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಬೂಬ ಪೂಜಾರಿ, ಉದ್ಯಾವರ ನಾಗೇಶ್ ಕುಮಾರ್, ಜಯಶ್ರೀ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ನಡೆದ ಕವಿಗೋಷ್ಠಿಯಲ್ಲಿ ಅನಿತಾ ಪಿಂಟೋ ಕೊಂಕಣಿ, ಸೌಮ್ಯ ಪ್ರವೀಣ್ ಕನ್ನಡ, ಸುಲೋಚನಾ ನವೀನ್ ತುಳು ಹಾಗೂ ಶಮೀಮ್ ಕುಟ್ಟಿಕಳ ಬ್ಯಾರಿ ಭಾಷೆಗಳಲ್ಲಿ ಕವನ ವಾಚಿಸಿದರು.
ವಿದ್ಯಾರ್ಥಿನಿ ಕೃಪಾಶ್ರೀ ನಿರೂಪಿಸಿ, ಶ್ರೇಯಾ ಸ್ವಾಗತಿಸಿ, ಪೂಜಾ ವಂದಿಸಿದರು.

ಬಳಿಕ ವಿದ್ಯಾರ್ಥಿಗಳಿಂದ ನೃತ್ಯ, ಸಮೂಹ ಗಾಯನ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು