4:25 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ‘ದೀಪಾವಳಿ ಪರ್ವದ ಐಸಿರ’ ಕಾರ್ಯಕ್ರಮ

21/10/2025, 19:36

ಮಂಗಳೂರು:(reporterkarnataka.com):ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಯೋಗದಲ್ಲಿ ದೀಪಾವಳಿ ಪರ್ಬದ ಐಸಿರ, ಪಾತೆರಕತೆ, ಕಬಿಗೋಷ್ಠಿ, ನೃತ್ಯ ಸಂಭ್ರಮ, ಪದರಂಗಿತ ಕಾರ್ಯಕ್ರಮ ಬಲ್ಮಠ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜರಗಿತು.


ಕಾರ್ಯಕ್ರಮವನ್ನು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ. ಕಿಶೋರ್ ಕುಮಾರ್ ರೈ ಶ್ರೇಣಿ ಉದ್ಘಾಟಿಸಿ ಮಾತನಾಡಿ, ತುಳುನಾಡಿನ ಬೆಳಕಿನ ಹಬ್ಬ ಪ್ರಕೃತಿ ಆರಾಧನೆಯನ್ನು ಒಳಗೊಂಡಿದೆ. ಇಂದಿನ ಮಕ್ಕಳಿಗೆ ನಮ್ಮ ಆಚರಣೆಗಳ ಬಗ್ಗೆ ಅರಿವು ಮೂಡಿಸುವ ಶಿಕ್ಷಣ ನೀಡಬೇಕು. ಹಂಡೆ ತುಂಬಿಸಿ, ಅಲಂಕರಿಸಿ, ಎಣ್ಣೆ ಹಚ್ಚಿ ಸ್ನಾನ ಮಾಡುವ ಮೂಲಕ ಆರಂಭಗೊಳ್ಳುವ ಹಬ್ಬದ ಗೋಪೂಜೆ ಸೇರಿದಂತೆ ಬಲಿಯೇಂದ್ರನನ್ನು ಕರೆಯುವ ವಿಶೇಷ ಆಚರಣೆಗಳ‌ ಮೂಲಕ ತನ್ನದೇ ಪ್ರಾಮುಖ್ಯೆ ಪಡೆದುಕೊಂಡಿದೆ ಎಂದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಧರ್ಮಗಳು ಹಿಂದಿನಂತೆ ಒಟ್ಟಾಗಿ ಇರಬೇಕು
ಹಬ್ಬಗಳು ಪ್ರಕೃತಿ ಯ ನೆಲೆಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಬೆಸೆದಿರುತ್ತದೆ. ಹಬ್ಬಗಳು ಎಂದರೆ ಎಲ್ಲರನ್ನೂ ಒಟ್ಟುಗೂಡಿಸುವುದಾಗಿದೆ ಎಂದರು.

ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ ಬಾಳ ಗೌರವ ಉಪಸ್ಥಿತಿ ವಹಿಸಿದ್ದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಬೂಬ ಪೂಜಾರಿ, ಉದ್ಯಾವರ ನಾಗೇಶ್ ಕುಮಾರ್, ಜಯಶ್ರೀ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ನಡೆದ ಕವಿಗೋಷ್ಠಿಯಲ್ಲಿ ಅನಿತಾ ಪಿಂಟೋ ಕೊಂಕಣಿ, ಸೌಮ್ಯ ಪ್ರವೀಣ್ ಕನ್ನಡ, ಸುಲೋಚನಾ ನವೀನ್ ತುಳು ಹಾಗೂ ಶಮೀಮ್ ಕುಟ್ಟಿಕಳ ಬ್ಯಾರಿ ಭಾಷೆಗಳಲ್ಲಿ ಕವನ ವಾಚಿಸಿದರು.
ವಿದ್ಯಾರ್ಥಿನಿ ಕೃಪಾಶ್ರೀ ನಿರೂಪಿಸಿ, ಶ್ರೇಯಾ ಸ್ವಾಗತಿಸಿ, ಪೂಜಾ ವಂದಿಸಿದರು.

ಬಳಿಕ ವಿದ್ಯಾರ್ಥಿಗಳಿಂದ ನೃತ್ಯ, ಸಮೂಹ ಗಾಯನ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು