4:14 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಕೋಟ

29/07/2021, 19:55


ಬೆಂಗಳೂರು(reporterkarnataka.com)
:

ಬೆಂಗಳೂರು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ಎಂದಿದ್ದಾರೆ.

ಎರಡೂ ಖಾತೆಗಳಲ್ಲೂ ಒಳ್ಳೆಯ ಕೆಲಸ ಮಾಡಿದ್ದೇನೆ. ಸಚಿವನಾಗಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಹಾಗಾಗಿ ನನಗೆ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ನನಗೂ ಇದೆ ಎಂದು ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರ ಸಂಪುಟದಲ್ಲಿದ್ದ ಕೆಲವು ಹಿರಿಯ ನಾಯಕರಿಗೆ ಕೋಕ್ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,  ಹೈಕಮಾಂಡ್ ನನ್ನ ಸಾಧನೆಯನ್ನು ಗಮನಿಸಿ ಮತ್ತೆ ಸಚಿವ ಸ್ಥಾನ ನೀಡುವ ನಿರೀಕ್ಷೆಯಿದೆ ಎಂದರು.

ಮಂತ್ರಿ ಮಂಡಲದಲ್ಲಿ ನಾನಿರಬೇಕು ಅನ್ನೋದನ್ನ ನಿರ್ಧಾರ ಮಾಡೋದು ನಾನಲ್ಲ. ನಮ್ಮ ನೂತನ ಸಿಎಂ, ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಯಡಿಯೂರಪ್ಪ ಹಾಗೂ ಹೈಕಮಾಂಡ್ ತೀರ್ಮಾನ ಮಾಡ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು