7:41 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್ ಆಯ್ಕೆ

26/07/2023, 22:01

ಮಂಗಳೂರು(reporterkarnataka.com): ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆಯು ಕೆ.ಜೆ.ಯು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ಸಭಾಂಗಣದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಮುಂದಿನ ಅವಧಿಗೆ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಸಮಿತಿಯ ಗೌರವಾಧ್ಯಕ್ಷರಾಗಿ ಹರೀಶ್ ಬಂಟ್ವಾಳ್, ಗೌರವ ಸಲಹೆಗಾರರಾಗಿ ರಿಚರ್ಡ್ ಲಸ್ರಾದೋ, ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್, ಪ್ರಧಾನ ಕಾರ್ಯದರ್ಶಿಯಾಗಿ ಕೆನ್ಯೂಟ್ ಪಿಂಟೋ, ಕೋಶಾಧಿಕಾರಿಯಾಗಿ ಗಿರಿಧರ ಶೆಟ್ಟಿ , ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ವಿಟ್ಲ ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಲಕ್ಷ್ಮಣ ಕುಂದರ್, ಮಂದಾರ ರಾಜೇಶ್ ಭಟ್, ಶರೀಫ್ ಜಟ್ಟಿಪಳ್ಳ, ಜ್ಯೋತಿ ಪ್ರಕಾಶ್ ಪುಣಚ ಆಯ್ಕೆಯಾದರು.
ಕಾರ್ಯದರ್ಶಿಗಳಾಗಿ ಶ್ರೀಮತಿ ಪೂಜಾಶ್ರೀ ವಿತೇಶ್ ಕೋಡಿ, ಶ್ರೀಮತಿ ಹೇಮಾ ಜಯರಾಮ ರೈ, ಗಣೇಶ್ ಕುಕ್ಕುದಡಿ ಆಯ್ಕೆಯಾದರು. ಸದಸ್ಯತ್ವ ಅಭಿಯಾನದ ಸಂಚಾಲಕರಾಗಿ ಈಶ್ವರ ವಾರಣಾಶಿಯವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಗೋಪಾಲ ಅಂಚನ್, ಶಿವಪ್ರಸಾದ್ ಆಲೆಟ್ಟಿ, ರಾಮದಾಸ್ ವಿಟ್ಲ, ಯಶ್ವಿತ್ ಕಾಳಮ್ಮನೆ, ಶ್ರೀಮತಿ ಜಯಶ್ರೀ ಕೊಯಿಂಗೋಡಿ, ಶ್ರೀಧರ ಕಜೆಗದ್ದೆ, ರಮೇಶ್ ಪೆರ್ಲ, ಡೊನಾಲ್ಡ್ ಪಿರೇರಾ ,ರಮೇಶ್ ನೀರಬಿದಿರೆ, ವಿನಯ್ ಜಾಲ್ಸೂರು, ಕೆ.ಟಿ. ಬಾಗೀಶ್ ಕೊಯಿಕುಳಿ, ವಿನಯ್ ಕಲ್ಮಡ್ಕ, ಕುಶಾಂತ್ ಕೊರತ್ಯಡ್ಕ, ಧನರಾಜ್,ಅನುಷ್ ಪಂಡಿತ್ , ಶ್ರೀಮತಿ ರಮ್ಯಾ ಸತೀಶ್ ಕಳಂಜ, ಶ್ರೀಮತಿ ರೇಖಾ ಸುಭಾಷ್, ಫ್ಲಾಯ್ಡ್ ಜೀವನ್ ಫರ್ನಾಂಡೀಸ್, ಶಿವಪ್ರಸಾದ್ ಆಲೆಟ್ಟಿ, ರಾಮದಾಸ್ ವಿಟ್ಲ, ಅಶ್ವಿತ್ ಸುಳ್ಯ ಆಯ್ಕೆಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು