5:43 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ, ವಿದೇಶಕ್ಕೆ ತೆರಳುವ ಉದ್ಯೋಗಿಗಳಿಗೆ ಲಸಿಕೆ ನೋಂದಣಿ ಆರಂಭ: ಶಾಸಕ ವೇದವ್ಯಾಸ ಕಾಮತ್

05/06/2021, 19:20

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಿಂದ ಉದ್ಯೋಗಕ್ಕಾಗಿ, ರಜೆಯಲ್ಲಿದ್ದು ವಾಪಸ್ಸು ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ ಅಥವಾ ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ವಿತರಣೆ ಕಾರ್ಯ ನಾಳೆ ನಗರದ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ದಕ್ಷಿಣ ವತಿಯಿಂದ ಕೆಲ ದಿನಗಳ ಹಿಂದೆ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ನನಗೆ ಸೈನಿಕರಿಗೆ, ಉದ್ಯೋಗ ಮತ್ತು ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ನೀಡುವ ಕುರಿತು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಂಸದರು ಹಾಗೂ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಅವರೊಂದಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಈ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಇದಕ್ಕಾಗಿ ಆನ್ ಲೈನ್ http://dk.nic.in ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅಲ್ಲಿ ನೀಡಿರುವ ವಿಭಾಗಗಳಲ್ಲಿ ನೋಂದಾಯಿಸಿಕೊಂಡು ಬೇಕಾಗುವ ದಾಖಲೆಗಳನ್ನು ಭರ್ತಿ ಮಾಡಬೇಕು. ಆನಂತರ ಅರ್ಜಿ ಸಲ್ಲಿಸಿದವರಿಗೆ ದೂರವಾಣಿಯ ಮೂಲಕ ಲಸಿಕೆ ನೀಡುವ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಎಲ್ಲಾ ಚಟುವಟಿಕೆಗಳ ಪೂರ್ಣ ಜವಬ್ದಾರಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಾರಾಗಿರುವ ಪ್ರಭಾಕರ್ ಶರ್ಮ ಅವರು ಹೊತ್ತಿದ್ದಾರೆ. ಹಂತ ಹಂತವಾಗಿ ಲಸಿಕೆ ವಿತರಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ನನ್ನ ಕಚೇರಿಯನ್ನು, ಪ್ರಭಾಕರ್ ಶರ್ಮಾ ಅವರನ್ನು ಅಥವ ರೆಡ್ ಕ್ರಾಸ್‌ ಸಂಸ್ಥೆಯ ಪ್ರಮುಖರಾದ ಶಾಂತರಾಮ್ ಶೆಟ್ಟಿ ಅವರನ್ನು ಸಂಪರ್ಕಿಸಬಹುದು. ಅಗತ್ಯವಿರುವವರು ಕೂಡಲೇ ನೋಂದಾಯಿಸಿಕೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು