7:03 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ, ವಿದೇಶಕ್ಕೆ ತೆರಳುವ ಉದ್ಯೋಗಿಗಳಿಗೆ ಲಸಿಕೆ ನೋಂದಣಿ ಆರಂಭ: ಶಾಸಕ ವೇದವ್ಯಾಸ ಕಾಮತ್

05/06/2021, 19:20

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಿಂದ ಉದ್ಯೋಗಕ್ಕಾಗಿ, ರಜೆಯಲ್ಲಿದ್ದು ವಾಪಸ್ಸು ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ ಅಥವಾ ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ವಿತರಣೆ ಕಾರ್ಯ ನಾಳೆ ನಗರದ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ದಕ್ಷಿಣ ವತಿಯಿಂದ ಕೆಲ ದಿನಗಳ ಹಿಂದೆ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ನನಗೆ ಸೈನಿಕರಿಗೆ, ಉದ್ಯೋಗ ಮತ್ತು ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ನೀಡುವ ಕುರಿತು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಂಸದರು ಹಾಗೂ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಅವರೊಂದಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಈ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಇದಕ್ಕಾಗಿ ಆನ್ ಲೈನ್ http://dk.nic.in ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅಲ್ಲಿ ನೀಡಿರುವ ವಿಭಾಗಗಳಲ್ಲಿ ನೋಂದಾಯಿಸಿಕೊಂಡು ಬೇಕಾಗುವ ದಾಖಲೆಗಳನ್ನು ಭರ್ತಿ ಮಾಡಬೇಕು. ಆನಂತರ ಅರ್ಜಿ ಸಲ್ಲಿಸಿದವರಿಗೆ ದೂರವಾಣಿಯ ಮೂಲಕ ಲಸಿಕೆ ನೀಡುವ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಎಲ್ಲಾ ಚಟುವಟಿಕೆಗಳ ಪೂರ್ಣ ಜವಬ್ದಾರಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಾರಾಗಿರುವ ಪ್ರಭಾಕರ್ ಶರ್ಮ ಅವರು ಹೊತ್ತಿದ್ದಾರೆ. ಹಂತ ಹಂತವಾಗಿ ಲಸಿಕೆ ವಿತರಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ನನ್ನ ಕಚೇರಿಯನ್ನು, ಪ್ರಭಾಕರ್ ಶರ್ಮಾ ಅವರನ್ನು ಅಥವ ರೆಡ್ ಕ್ರಾಸ್‌ ಸಂಸ್ಥೆಯ ಪ್ರಮುಖರಾದ ಶಾಂತರಾಮ್ ಶೆಟ್ಟಿ ಅವರನ್ನು ಸಂಪರ್ಕಿಸಬಹುದು. ಅಗತ್ಯವಿರುವವರು ಕೂಡಲೇ ನೋಂದಾಯಿಸಿಕೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು