8:26 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ, ವಿದೇಶಕ್ಕೆ ತೆರಳುವ ಉದ್ಯೋಗಿಗಳಿಗೆ ಲಸಿಕೆ ನೋಂದಣಿ ಆರಂಭ: ಶಾಸಕ ವೇದವ್ಯಾಸ ಕಾಮತ್

05/06/2021, 19:20

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಿಂದ ಉದ್ಯೋಗಕ್ಕಾಗಿ, ರಜೆಯಲ್ಲಿದ್ದು ವಾಪಸ್ಸು ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ ಅಥವಾ ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ವಿತರಣೆ ಕಾರ್ಯ ನಾಳೆ ನಗರದ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ದಕ್ಷಿಣ ವತಿಯಿಂದ ಕೆಲ ದಿನಗಳ ಹಿಂದೆ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ನನಗೆ ಸೈನಿಕರಿಗೆ, ಉದ್ಯೋಗ ಮತ್ತು ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ನೀಡುವ ಕುರಿತು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಂಸದರು ಹಾಗೂ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಅವರೊಂದಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಈ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಇದಕ್ಕಾಗಿ ಆನ್ ಲೈನ್ http://dk.nic.in ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅಲ್ಲಿ ನೀಡಿರುವ ವಿಭಾಗಗಳಲ್ಲಿ ನೋಂದಾಯಿಸಿಕೊಂಡು ಬೇಕಾಗುವ ದಾಖಲೆಗಳನ್ನು ಭರ್ತಿ ಮಾಡಬೇಕು. ಆನಂತರ ಅರ್ಜಿ ಸಲ್ಲಿಸಿದವರಿಗೆ ದೂರವಾಣಿಯ ಮೂಲಕ ಲಸಿಕೆ ನೀಡುವ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಎಲ್ಲಾ ಚಟುವಟಿಕೆಗಳ ಪೂರ್ಣ ಜವಬ್ದಾರಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಾರಾಗಿರುವ ಪ್ರಭಾಕರ್ ಶರ್ಮ ಅವರು ಹೊತ್ತಿದ್ದಾರೆ. ಹಂತ ಹಂತವಾಗಿ ಲಸಿಕೆ ವಿತರಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ನನ್ನ ಕಚೇರಿಯನ್ನು, ಪ್ರಭಾಕರ್ ಶರ್ಮಾ ಅವರನ್ನು ಅಥವ ರೆಡ್ ಕ್ರಾಸ್‌ ಸಂಸ್ಥೆಯ ಪ್ರಮುಖರಾದ ಶಾಂತರಾಮ್ ಶೆಟ್ಟಿ ಅವರನ್ನು ಸಂಪರ್ಕಿಸಬಹುದು. ಅಗತ್ಯವಿರುವವರು ಕೂಡಲೇ ನೋಂದಾಯಿಸಿಕೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು