2:43 PM Wednesday11 - March 2026
ಬ್ರೇಕಿಂಗ್ ನ್ಯೂಸ್
ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸದ ದೀಪೋತ್ಸವ: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವ

12/12/2023, 14:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸದ ಕಡೆಯ ಸೋಮವಾರದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವವನ್ನು ಸಡಗರ ಸಂಭ್ರಮ ಹಾಗು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.


ನಂಜನಗೂಡು ತಾಲೂಕಿನ ಸ್ಥಳೀಯ ನಯನಜಕ್ಷತ್ರಿಯ ಜನಾಂಗ ಹಾಗೂ ಮುಡಿ ಕಟ್ಟೆ ಸಂಘದ ವತಿಯಿಂದ ಅನಾದಿ ಕಾಲದಿಂದಲೂ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವ
ನಡೆಸಿಕೊಂಡು ಬರುತ್ತಿದೆ.
ಚಿನ್ನಾಭರಣ ಹಾಗೂ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಲಾದ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರ ತಂದು ವಿದ್ಯುತ್ ದೀಪ ಹಾಗೂ ಹೂಗಳಿಂದ ಅಲಂಕರಿಸಲಾಗಿದ್ದ ರಥದಲ್ಲಿ ಕೂರಿಸಲಾಯಿತು.
ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿನ ಹೆಸರಾಂತ ವಾದ್ಯಗೋಷ್ಠಿ ಮುಖಾಂತರ ಪಟ್ಟಣದ ರಥ ಬೀದಿಯಲ್ಲಿ ಉತ್ಸವ ನಡೆಸಲಾಯಿತು.
ಉತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಉತ್ಸವವನ್ನು ಕಣ್ತುಂಬಿಕೊಂಡು ತಮ್ಮ ಭಕ್ತಿ ಭಾವ ಮೆರೆದರು. ಉತ್ಸವದ ಉದ್ದಕ್ಕೂ ಸಂಘದ ವತಿಯಿಂದ ವಿವಿಧ ಬಗೆಯ ಪಟಾಕಿ ಬಾಣ ಬಿರುಸುಗಳನ್ನು ಸಿಡಿಸಿ ನೆರೆದಿದ್ದ ಭಕ್ತರ ಮನಸೂರೆಗೊಂಡರು.
ಇದೇ ಸಂದರ್ಭ ದೇವಾಲಯದ ಹೊರಗೆ ನೂರಾರು ಭಕ್ತರು ವಿವಿಧ ಬಗೆಯ ದೀಪಾರತಿಗಳನ್ನು ಬೆಳಗುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು. ಜನಾಂಗದ ಮುಖಂಡ ಶ್ರೀನಿವಾಸ್ ಮಾತನಾಡಿ ನಮ್ಮ ಜನಾಂಗ ಹಾಗೂ ಮುಡಿಕಟ್ಟೆ ವತಿಯಿಂದ ಕಾರ್ತಿಕ ಮಾಸದ ಕಡೆ ಸೋಮವಾರದಂದು ಪ್ರತಿ ವರ್ಷದಂತೆ ಹೆಸರಾಂತ ವಾದ್ಯಗೋಷ್ಠಿಯವರನ್ನು ಕರೆಸಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವವನ್ನು ವಿಜೃಂಭಣೆಯಿಂದ ನಡೆಸುತ್ತಾ ಬಂದಿದ್ದೇವೆ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಸೇರಿದಂತೆ ನಯನಜ ಕ್ಷತ್ರಿಯ ಹಾಗೂ ಮುಡಿಕಟ್ಟೆ ಸಂಘದ ಪದಾಧಿಕಾರಿಗಳು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು