3:50 AM Monday14 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸ: ದಕ್ಷಿಣ ಕಾಶಿ ನಂಜನಗೂಡಿಗೆ ಹರಿದು ಬಂದ ಭಕ್ತ ಸಾಗರ

18/11/2024, 18:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸದ ಶುಭ ಸೋಮವಾರದ ಪ್ರಯುಕ್ತ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತರ ಮಹಾಪೂರವೇ ಹರಿದು ಬಂತು. ಬೆಳಗಿನ ಜಾವ ಐದು ಗಂಟೆಯಿಂದಲೇ ಶ್ರೀಕಂಠೇಶ್ವರ ಸ್ವಾಮಿ ಅವರಿಗೆ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿವಿಧ ಅಭಿಷೇಕ ಪೂಜೆಗಳನ್ನು ನೆರವೇರಿಸಲಾಯಿತು.


ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಬಂದ ಭಕ್ತರು ಮುಡಿಸೇವೆ ಉರುಳು ಸೇವೆ ತುಲಾಭಾರ ಸೇವೆಗಳನ್ನು ಮುಗಿಸಿ ಸರತಿ ಸಾಲಿನಲ್ಲಿ ಬಂದು ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು. ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ದೇವಾಲಯದ ಒಳಗೆ ಪ್ರವೇಶಿಸಲು ಭಕ್ತರು ಗಂಟೆಗಟ್ಟಲೆ ಕಾಯುವ ಮುಖಾಂತರ ಹರಸಾಹಸ ಪಡಬೇಕಾಯಿತು.
ದೇವಾಲಯದ ಒಳಗೆ ಪ್ರವೇಶಿಸಲು ಆಗದ ಸಾವಿರಾರು ಭಕ್ತರು ದೇವಾಲಯದ ಮುಂಭಾಗ ಹೊರ ಆವರಣದಲ್ಲಿಯೇ ಪೂಜೆ ಸಲ್ಲಿಸಿ ದೀಪಾರಥಿಗಳನ್ನು ಬೆಳಗುವ ಮೂಲಕ ಅಲ್ಲಿಂದಲೇ ತಮ್ಮ ಭಕ್ತಿ ಭಾವ ಸಮರ್ಪಿಸಿದರು.
ನಿತ್ಯ ದಾಸೋಹದಂತೆ ದಾನಿ ಒಬ್ಬರು ಬಂದ ಎಲ್ಲಾ ಭಕ್ತರಿಗೆ ಇಂದಿನ ಒಂದು ದಿನದ ದಾಸೋಹದ ಸೇವೆಯನ್ನು ಒದಗಿಸಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.
ದೇವಾಲಯದ ವತಿಯಿಂದ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತಾದರೂ ಸರಿಯಾದ ನಿರ್ವಹಣೆ ಇಲ್ಲದೆ ಘರ್ಷಣೆಗೆ ಕಾರಣವಾಗಿ ಮುಚ್ಚಲಾಯಿತು.
ಇದರಿಂದಾಗಿ ದೂರ ದೂರದ ಊರುಗಳಿಂದ ಬಂದ ಕೆಲ ಹಿರಿಯ ನಾಗರಿಕರು ದೇವಸ್ಥಾನದ ಒಳ ಹೋಗಲಾರದೆ ಹಾಗೂ ದೇವರ ದರ್ಶನ ಪಡೆಯಲಾಗದೆ ಹಿಂದಿರುಗಿರುವ ಘಟನೆಗಳು ನಡೆದವು. ಅಲ್ಲದೆ ಭಕ್ತರ ಅನುಕೂಲಕ್ಕಾಗಿ ಹಾಗೂ ಉರುಳು ಸೇವೆಗಾಗಿ ಶಾಮಿಯಾನ ಹಾಕಿದ್ದ ಜಾಗದಲ್ಲಿ ಹಾಗೂ ಹಳ್ಳದ ಕೇರಿಗೆ ಹೋಗುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಕಾರುಗಳನ್ನು ನಿಲ್ಲಿಸುವ ಮೂಲಕ ಸಂಚಾರ ಅಡಚಣೆಗೆ ಕಾರಣವಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಟ್ಟ ದೇವಾಲಯ ಹಾಗೂ ನಗರಸಭೆ ಆಡಳಿತ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ದೇವಾಲಯಕ್ಕೆ ಭಕ್ತರ ಮಹಾ ಪೂರವೇ ಹರಿದು ಬಂದ ಕಾರಣ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಸಹ ಹರಸಾಹಸ ಪಡಬೇಕಾಯಿತು.
ದೇವಾಲಯದ ಪ್ರಧಾನ ಆಗಮಿಕರಾದ ಶ್ರೀ ನಾಗಚಂದ್ರ ದೀಕ್ಷಿತ್ ಅವರು ಮಾತನಾಡಿ ವಿಶೇಷತೆಯ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು