7:36 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸ: ದಕ್ಷಿಣ ಕಾಶಿ ನಂಜನಗೂಡಿಗೆ ಹರಿದು ಬಂದ ಭಕ್ತ ಸಾಗರ

18/11/2024, 18:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸದ ಶುಭ ಸೋಮವಾರದ ಪ್ರಯುಕ್ತ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತರ ಮಹಾಪೂರವೇ ಹರಿದು ಬಂತು. ಬೆಳಗಿನ ಜಾವ ಐದು ಗಂಟೆಯಿಂದಲೇ ಶ್ರೀಕಂಠೇಶ್ವರ ಸ್ವಾಮಿ ಅವರಿಗೆ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿವಿಧ ಅಭಿಷೇಕ ಪೂಜೆಗಳನ್ನು ನೆರವೇರಿಸಲಾಯಿತು.


ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಬಂದ ಭಕ್ತರು ಮುಡಿಸೇವೆ ಉರುಳು ಸೇವೆ ತುಲಾಭಾರ ಸೇವೆಗಳನ್ನು ಮುಗಿಸಿ ಸರತಿ ಸಾಲಿನಲ್ಲಿ ಬಂದು ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು. ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ದೇವಾಲಯದ ಒಳಗೆ ಪ್ರವೇಶಿಸಲು ಭಕ್ತರು ಗಂಟೆಗಟ್ಟಲೆ ಕಾಯುವ ಮುಖಾಂತರ ಹರಸಾಹಸ ಪಡಬೇಕಾಯಿತು.
ದೇವಾಲಯದ ಒಳಗೆ ಪ್ರವೇಶಿಸಲು ಆಗದ ಸಾವಿರಾರು ಭಕ್ತರು ದೇವಾಲಯದ ಮುಂಭಾಗ ಹೊರ ಆವರಣದಲ್ಲಿಯೇ ಪೂಜೆ ಸಲ್ಲಿಸಿ ದೀಪಾರಥಿಗಳನ್ನು ಬೆಳಗುವ ಮೂಲಕ ಅಲ್ಲಿಂದಲೇ ತಮ್ಮ ಭಕ್ತಿ ಭಾವ ಸಮರ್ಪಿಸಿದರು.
ನಿತ್ಯ ದಾಸೋಹದಂತೆ ದಾನಿ ಒಬ್ಬರು ಬಂದ ಎಲ್ಲಾ ಭಕ್ತರಿಗೆ ಇಂದಿನ ಒಂದು ದಿನದ ದಾಸೋಹದ ಸೇವೆಯನ್ನು ಒದಗಿಸಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.
ದೇವಾಲಯದ ವತಿಯಿಂದ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತಾದರೂ ಸರಿಯಾದ ನಿರ್ವಹಣೆ ಇಲ್ಲದೆ ಘರ್ಷಣೆಗೆ ಕಾರಣವಾಗಿ ಮುಚ್ಚಲಾಯಿತು.
ಇದರಿಂದಾಗಿ ದೂರ ದೂರದ ಊರುಗಳಿಂದ ಬಂದ ಕೆಲ ಹಿರಿಯ ನಾಗರಿಕರು ದೇವಸ್ಥಾನದ ಒಳ ಹೋಗಲಾರದೆ ಹಾಗೂ ದೇವರ ದರ್ಶನ ಪಡೆಯಲಾಗದೆ ಹಿಂದಿರುಗಿರುವ ಘಟನೆಗಳು ನಡೆದವು. ಅಲ್ಲದೆ ಭಕ್ತರ ಅನುಕೂಲಕ್ಕಾಗಿ ಹಾಗೂ ಉರುಳು ಸೇವೆಗಾಗಿ ಶಾಮಿಯಾನ ಹಾಕಿದ್ದ ಜಾಗದಲ್ಲಿ ಹಾಗೂ ಹಳ್ಳದ ಕೇರಿಗೆ ಹೋಗುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಕಾರುಗಳನ್ನು ನಿಲ್ಲಿಸುವ ಮೂಲಕ ಸಂಚಾರ ಅಡಚಣೆಗೆ ಕಾರಣವಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಟ್ಟ ದೇವಾಲಯ ಹಾಗೂ ನಗರಸಭೆ ಆಡಳಿತ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ದೇವಾಲಯಕ್ಕೆ ಭಕ್ತರ ಮಹಾ ಪೂರವೇ ಹರಿದು ಬಂದ ಕಾರಣ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಸಹ ಹರಸಾಹಸ ಪಡಬೇಕಾಯಿತು.
ದೇವಾಲಯದ ಪ್ರಧಾನ ಆಗಮಿಕರಾದ ಶ್ರೀ ನಾಗಚಂದ್ರ ದೀಕ್ಷಿತ್ ಅವರು ಮಾತನಾಡಿ ವಿಶೇಷತೆಯ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು