3:49 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸ: ದಕ್ಷಿಣ ಕಾಶಿ ನಂಜನಗೂಡಿಗೆ ಹರಿದು ಬಂದ ಭಕ್ತ ಸಾಗರ

18/11/2024, 18:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸದ ಶುಭ ಸೋಮವಾರದ ಪ್ರಯುಕ್ತ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತರ ಮಹಾಪೂರವೇ ಹರಿದು ಬಂತು. ಬೆಳಗಿನ ಜಾವ ಐದು ಗಂಟೆಯಿಂದಲೇ ಶ್ರೀಕಂಠೇಶ್ವರ ಸ್ವಾಮಿ ಅವರಿಗೆ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿವಿಧ ಅಭಿಷೇಕ ಪೂಜೆಗಳನ್ನು ನೆರವೇರಿಸಲಾಯಿತು.


ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಬಂದ ಭಕ್ತರು ಮುಡಿಸೇವೆ ಉರುಳು ಸೇವೆ ತುಲಾಭಾರ ಸೇವೆಗಳನ್ನು ಮುಗಿಸಿ ಸರತಿ ಸಾಲಿನಲ್ಲಿ ಬಂದು ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು. ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ದೇವಾಲಯದ ಒಳಗೆ ಪ್ರವೇಶಿಸಲು ಭಕ್ತರು ಗಂಟೆಗಟ್ಟಲೆ ಕಾಯುವ ಮುಖಾಂತರ ಹರಸಾಹಸ ಪಡಬೇಕಾಯಿತು.
ದೇವಾಲಯದ ಒಳಗೆ ಪ್ರವೇಶಿಸಲು ಆಗದ ಸಾವಿರಾರು ಭಕ್ತರು ದೇವಾಲಯದ ಮುಂಭಾಗ ಹೊರ ಆವರಣದಲ್ಲಿಯೇ ಪೂಜೆ ಸಲ್ಲಿಸಿ ದೀಪಾರಥಿಗಳನ್ನು ಬೆಳಗುವ ಮೂಲಕ ಅಲ್ಲಿಂದಲೇ ತಮ್ಮ ಭಕ್ತಿ ಭಾವ ಸಮರ್ಪಿಸಿದರು.
ನಿತ್ಯ ದಾಸೋಹದಂತೆ ದಾನಿ ಒಬ್ಬರು ಬಂದ ಎಲ್ಲಾ ಭಕ್ತರಿಗೆ ಇಂದಿನ ಒಂದು ದಿನದ ದಾಸೋಹದ ಸೇವೆಯನ್ನು ಒದಗಿಸಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.
ದೇವಾಲಯದ ವತಿಯಿಂದ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತಾದರೂ ಸರಿಯಾದ ನಿರ್ವಹಣೆ ಇಲ್ಲದೆ ಘರ್ಷಣೆಗೆ ಕಾರಣವಾಗಿ ಮುಚ್ಚಲಾಯಿತು.
ಇದರಿಂದಾಗಿ ದೂರ ದೂರದ ಊರುಗಳಿಂದ ಬಂದ ಕೆಲ ಹಿರಿಯ ನಾಗರಿಕರು ದೇವಸ್ಥಾನದ ಒಳ ಹೋಗಲಾರದೆ ಹಾಗೂ ದೇವರ ದರ್ಶನ ಪಡೆಯಲಾಗದೆ ಹಿಂದಿರುಗಿರುವ ಘಟನೆಗಳು ನಡೆದವು. ಅಲ್ಲದೆ ಭಕ್ತರ ಅನುಕೂಲಕ್ಕಾಗಿ ಹಾಗೂ ಉರುಳು ಸೇವೆಗಾಗಿ ಶಾಮಿಯಾನ ಹಾಕಿದ್ದ ಜಾಗದಲ್ಲಿ ಹಾಗೂ ಹಳ್ಳದ ಕೇರಿಗೆ ಹೋಗುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಕಾರುಗಳನ್ನು ನಿಲ್ಲಿಸುವ ಮೂಲಕ ಸಂಚಾರ ಅಡಚಣೆಗೆ ಕಾರಣವಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಟ್ಟ ದೇವಾಲಯ ಹಾಗೂ ನಗರಸಭೆ ಆಡಳಿತ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ದೇವಾಲಯಕ್ಕೆ ಭಕ್ತರ ಮಹಾ ಪೂರವೇ ಹರಿದು ಬಂದ ಕಾರಣ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಸಹ ಹರಸಾಹಸ ಪಡಬೇಕಾಯಿತು.
ದೇವಾಲಯದ ಪ್ರಧಾನ ಆಗಮಿಕರಾದ ಶ್ರೀ ನಾಗಚಂದ್ರ ದೀಕ್ಷಿತ್ ಅವರು ಮಾತನಾಡಿ ವಿಶೇಷತೆಯ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು