6:05 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸದ ದೀಪೋತ್ಸವ: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವ

12/12/2023, 14:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸದ ಕಡೆಯ ಸೋಮವಾರದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವವನ್ನು ಸಡಗರ ಸಂಭ್ರಮ ಹಾಗು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.


ನಂಜನಗೂಡು ತಾಲೂಕಿನ ಸ್ಥಳೀಯ ನಯನಜಕ್ಷತ್ರಿಯ ಜನಾಂಗ ಹಾಗೂ ಮುಡಿ ಕಟ್ಟೆ ಸಂಘದ ವತಿಯಿಂದ ಅನಾದಿ ಕಾಲದಿಂದಲೂ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವ
ನಡೆಸಿಕೊಂಡು ಬರುತ್ತಿದೆ.
ಚಿನ್ನಾಭರಣ ಹಾಗೂ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಲಾದ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರ ತಂದು ವಿದ್ಯುತ್ ದೀಪ ಹಾಗೂ ಹೂಗಳಿಂದ ಅಲಂಕರಿಸಲಾಗಿದ್ದ ರಥದಲ್ಲಿ ಕೂರಿಸಲಾಯಿತು.
ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿನ ಹೆಸರಾಂತ ವಾದ್ಯಗೋಷ್ಠಿ ಮುಖಾಂತರ ಪಟ್ಟಣದ ರಥ ಬೀದಿಯಲ್ಲಿ ಉತ್ಸವ ನಡೆಸಲಾಯಿತು.
ಉತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಉತ್ಸವವನ್ನು ಕಣ್ತುಂಬಿಕೊಂಡು ತಮ್ಮ ಭಕ್ತಿ ಭಾವ ಮೆರೆದರು. ಉತ್ಸವದ ಉದ್ದಕ್ಕೂ ಸಂಘದ ವತಿಯಿಂದ ವಿವಿಧ ಬಗೆಯ ಪಟಾಕಿ ಬಾಣ ಬಿರುಸುಗಳನ್ನು ಸಿಡಿಸಿ ನೆರೆದಿದ್ದ ಭಕ್ತರ ಮನಸೂರೆಗೊಂಡರು.
ಇದೇ ಸಂದರ್ಭ ದೇವಾಲಯದ ಹೊರಗೆ ನೂರಾರು ಭಕ್ತರು ವಿವಿಧ ಬಗೆಯ ದೀಪಾರತಿಗಳನ್ನು ಬೆಳಗುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು. ಜನಾಂಗದ ಮುಖಂಡ ಶ್ರೀನಿವಾಸ್ ಮಾತನಾಡಿ ನಮ್ಮ ಜನಾಂಗ ಹಾಗೂ ಮುಡಿಕಟ್ಟೆ ವತಿಯಿಂದ ಕಾರ್ತಿಕ ಮಾಸದ ಕಡೆ ಸೋಮವಾರದಂದು ಪ್ರತಿ ವರ್ಷದಂತೆ ಹೆಸರಾಂತ ವಾದ್ಯಗೋಷ್ಠಿಯವರನ್ನು ಕರೆಸಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವವನ್ನು ವಿಜೃಂಭಣೆಯಿಂದ ನಡೆಸುತ್ತಾ ಬಂದಿದ್ದೇವೆ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಸೇರಿದಂತೆ ನಯನಜ ಕ್ಷತ್ರಿಯ ಹಾಗೂ ಮುಡಿಕಟ್ಟೆ ಸಂಘದ ಪದಾಧಿಕಾರಿಗಳು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು