3:20 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭವಾಗಲಿ: ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ

30/10/2022, 00:03

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭ ಆಗಬೇಕು. ಸಮಾಜದಲ್ಲಿ ಆಗುವ ತಪ್ಪುಗಳ ಬಗ್ಗೆ ಧ್ವನಿ ಎತ್ತುವ ಮನೋಭಾವವನ್ನು ಯುವಜನರು ಹೊಂದಿರಬೇಕು. ಪ್ರಾಥಮಿಕ ಹಂತದಿಂದಲೇ ಇಂತಹ ವಿಚಾರಗಳನ್ನು ಕಲಿಸುವ ಮತ್ತು ಅರಿಯುವ ಪ್ರಕ್ರಿಯೆ ಆದಾಗ ಎಲ್ಲರೂ ಸಮಾನರೆಂಬ ಮನೋಭಾವ ಹುಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ಅಭಿಪ್ರಾಯಪಟ್ಟರು.

ಅವರು ಶನಿವಾರ ನಗರದ ರೋಶನಿ ನಿಲಯ ಸಭಾಂಗಣದಲ್ಲಿ ಯುವಜನ ಮುನ್ನಡೆ- ಸಂವಾದ ಯುವಜನ ಸಂಪನ್ಮೂಲ ಕೇಂದ್ರದಿಂದ ಆಯೋಜಿಸಲಾದ ಯುವಜನ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಲ್ಲರೂ ಸಮಾನರೆಂಬ ಮನಸ್ಥಿತಿ ನಾವು ಬೆಳೆಸಿಕೊಂಡಾಗ ದೇಶಾಭಿಮಾನ ಬೆಳೆಸಿ ಕೊಳ್ಳಲು ಸಾಧ್ಯ ಎಂದು ಕರ್ತವ್ಯ ಪಾಲನೆಗಾಗಿ ಯುವಜನರ ಅಭಿವ್ಯಕ್ತಿ ಎಂಬ ವಿಚಾರದಲ್ಲಿ ಮಾತನಾಡಿದ ಅವರು ನುಡಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ ತಾರನಾಥ ಗಟ್ಟಿ ಮಾತನಾಡಿ, ಕರಾವಳಿಯಲ್ಲಿ ನಾವು ಹಿಂದೆ ಕಾಣುತ್ತಿದ್ದ ಭಾತೃತ್ವ, ಸೌಹಾರ್ದತೆ ದೂರವಾಗಿದೆ. ಊರು ಮಾತ್ರವಲ್ಲದೆ, ಕಾಲೇಜು ಕ್ಯಾಂಪಸ್‌ನಲ್ಲಿಯೂ ಮನಸ್ಸುಗಳ ನಡುವೆ ಕಂದಕವೇರ್ಪಟ್ಟಿದೆ. ಈ ಬಗ್ಗೆ ಯುವಜನತೆ ಅರಿತುಕೊಂಡು ತಮ್ಮ ಕರ್ತವ್ಯ ಪಾಲನೆಯನ್ನು ನಿರ್ವಹಿಸಬೇಕಾಗಿದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು