6:37 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಕರುಗಳ ವಧೆಗೆ ಸಿದ್ಧತೆ: ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳಿಂದ ದಾಳಿ; 2 ಕರು ವಶಕ್ಕೆ, ಆರೋಪಿಗಳು ಪರಾರಿ

21/07/2021, 18:36


ಮಂಗಳೂರು(reporterkarnataka new)
:

ಕುದ್ರೋಳಿ ಕಸಾಯಿಖಾನೆ ಬಳಿಯ ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿಯಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಧೆಗೆ ಸಿದ್ಧತೆ ಮಾಡಿದ್ದ ಎರಡು ಅಪ್ರಾಪ್ತ ವಯಸ್ಸಿನ ಕರುಗಳನ್ನು ಪತ್ತೆ ಮಾಡಿದ್ದಾರೆ.


ಕರುಗಳನ್ನು ವಶಕ್ಕೆ ಪಡೆದಿದ್ದು ಕೊಣಾಜೆಯ ಪಜೀರಿನಲ್ಲಿರುವ ಗೋವನಿತಾಶ್ರಮ ಗೋಶಾಲೆಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕುದ್ರೋಳಿ ಕಸಾಯಿಖಾನೆಯಲ್ಲಿ ಕರು ಸೇರಿದಂತೆ ಅಪ್ರಾಪ್ತ ವಯಸ್ಸಿನ ಗೋವುಗಳನ್ನು ಕಡಿಯುತ್ತಿರುವ ಬಗ್ಗೆ ಮಾಹಿತಿ ಪಡೆದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. 2020ರಲ್ಲಿ ಜಾರಿಗೆ ತಂದಿರುವ ನೂತನ ಕಾಯ್ದೆ ಪ್ರಕಾರ, ಅಪ್ರಾಪ್ತ ವಯಸ್ಸಿನ ಗೋವುಗಳನ್ನು ವಧೆ ಮಾಡುವುದು ಅಪರಾಧವಾಗಿದ್ದರಿಂದ ಕುದ್ರೋಳಿ ಕಸಾಯಿಖಾನೆಯ ಗುತ್ತಿಗೆ ಪಡೆದವರ ಲೈಸನ್ಸ್ ರದ್ದು ಮಾಡಲಾಗಿತ್ತು. ಅಲ್ಲದೆ, ವಧಾ ಗೃಹದ ಆವರಣದಲ್ಲಿ ಸಿಸಿಟಿವಿಯನ್ನೂ ಅಳವಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಕುದ್ರೋಳಿ ಕಸಾಯಿಖಾನೆಯಲ್ಲಿ ಗೋವುಗಳನ್ನು ಕಡಿಯಲಾಗಿಲ್ಲ ಎನ್ನುವ ಮಾಹಿತಿಯನ್ನು ಮೇಯರ್‌ ನೀಡಿದ್ದಾರೆ. ಅಲ್ಲದೆ, ಇಂದು ದಾಳಿ ನಡೆದಿರುವ ಜಾಗ ಅಲ್ಲಿಯೇ ಪಕ್ಕದ ಖಾಸಗಿ ಜಾಗ, ಆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ. ಕಸಾಯಿಖಾನೆಯ ಪಕ್ಕದಲ್ಲೇ ಬೇರೊಂದು ಕಟ್ಟಡದಲ್ಲಿ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇಂದು ಬಕ್ರೀದ್ ಹಿನ್ನೆಲೆಯಲ್ಲಿ ಕಸಾಯಿಖಾನೆ ನಡೆಸುತ್ತಿದ್ದವರೇ ಕರುಗಳನ್ನು ಕಡಿಯಲು ಸಿದ್ಧತೆ ನಡೆಸಿದ್ದರು ಎಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು