3:58 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕರುಗಳ ವಧೆಗೆ ಸಿದ್ಧತೆ: ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳಿಂದ ದಾಳಿ; 2 ಕರು ವಶಕ್ಕೆ, ಆರೋಪಿಗಳು ಪರಾರಿ

21/07/2021, 18:36


ಮಂಗಳೂರು(reporterkarnataka new)
:

ಕುದ್ರೋಳಿ ಕಸಾಯಿಖಾನೆ ಬಳಿಯ ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿಯಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಧೆಗೆ ಸಿದ್ಧತೆ ಮಾಡಿದ್ದ ಎರಡು ಅಪ್ರಾಪ್ತ ವಯಸ್ಸಿನ ಕರುಗಳನ್ನು ಪತ್ತೆ ಮಾಡಿದ್ದಾರೆ.


ಕರುಗಳನ್ನು ವಶಕ್ಕೆ ಪಡೆದಿದ್ದು ಕೊಣಾಜೆಯ ಪಜೀರಿನಲ್ಲಿರುವ ಗೋವನಿತಾಶ್ರಮ ಗೋಶಾಲೆಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕುದ್ರೋಳಿ ಕಸಾಯಿಖಾನೆಯಲ್ಲಿ ಕರು ಸೇರಿದಂತೆ ಅಪ್ರಾಪ್ತ ವಯಸ್ಸಿನ ಗೋವುಗಳನ್ನು ಕಡಿಯುತ್ತಿರುವ ಬಗ್ಗೆ ಮಾಹಿತಿ ಪಡೆದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. 2020ರಲ್ಲಿ ಜಾರಿಗೆ ತಂದಿರುವ ನೂತನ ಕಾಯ್ದೆ ಪ್ರಕಾರ, ಅಪ್ರಾಪ್ತ ವಯಸ್ಸಿನ ಗೋವುಗಳನ್ನು ವಧೆ ಮಾಡುವುದು ಅಪರಾಧವಾಗಿದ್ದರಿಂದ ಕುದ್ರೋಳಿ ಕಸಾಯಿಖಾನೆಯ ಗುತ್ತಿಗೆ ಪಡೆದವರ ಲೈಸನ್ಸ್ ರದ್ದು ಮಾಡಲಾಗಿತ್ತು. ಅಲ್ಲದೆ, ವಧಾ ಗೃಹದ ಆವರಣದಲ್ಲಿ ಸಿಸಿಟಿವಿಯನ್ನೂ ಅಳವಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಕುದ್ರೋಳಿ ಕಸಾಯಿಖಾನೆಯಲ್ಲಿ ಗೋವುಗಳನ್ನು ಕಡಿಯಲಾಗಿಲ್ಲ ಎನ್ನುವ ಮಾಹಿತಿಯನ್ನು ಮೇಯರ್‌ ನೀಡಿದ್ದಾರೆ. ಅಲ್ಲದೆ, ಇಂದು ದಾಳಿ ನಡೆದಿರುವ ಜಾಗ ಅಲ್ಲಿಯೇ ಪಕ್ಕದ ಖಾಸಗಿ ಜಾಗ, ಆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ. ಕಸಾಯಿಖಾನೆಯ ಪಕ್ಕದಲ್ಲೇ ಬೇರೊಂದು ಕಟ್ಟಡದಲ್ಲಿ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇಂದು ಬಕ್ರೀದ್ ಹಿನ್ನೆಲೆಯಲ್ಲಿ ಕಸಾಯಿಖಾನೆ ನಡೆಸುತ್ತಿದ್ದವರೇ ಕರುಗಳನ್ನು ಕಡಿಯಲು ಸಿದ್ಧತೆ ನಡೆಸಿದ್ದರು ಎಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು