6:46 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕಾರವಾರ ‘ಸಿದ್ಧಬಸವೇಶ್ವರ’ ಅನುಭವ ಮಂಟಪದಲ್ಲಿ ‘ಅನುಭಾವ ಸಂಗಮ’ ಸಂಪನ್ನ

26/08/2022, 20:49

ಕಾರವಾರ(reporterkarnataka.com):
ಶರಣ ಮಾಸದ ಕೊನೆಯ ಸೋಮವಾರದಂದು ಸುಕ್ಷೇತ್ರ ಕಾರವಾರದ ಬಂಗಾರಪ್ಪ ಕಾಲೋನಿಯ “ಸಿದ್ಧಬಸವೇಶ್ವರ” ಅನುಭವ ಮಂಟಪದಲ್ಲಿ “ಅನುಭಾವ ಸಂಗಮ” ಕಾರ್ಯಕ್ರಮ ಸಂತೋಷ ಸಡಗರದಿಂದ ಸಂಪನ್ನಗೊಂಡಿತು.


ಅಂದು ಶರಣ ಸಿದ್ದಯ್ಯಸ್ವಾಮಿ ಚೌಕಿಮಠ ಗೋನಾಳ ಅವರೊಂದಿಗೆ ಅವರ ಸಹೋದರರ ಕುಟುಂಬವು ಪ್ರತಿವರ್ಷದಂತೆ ಸ್ಥಳೀಯ ಆಯುಷ ಇಲಾಖೆಯ ಮುಖ್ಯಸ್ಥರಾದ ಶರಣ ಡಾ.ಮಲ್ಲಿಕಾರ್ಜುನ ಹಿರೇಮಠ ಮಸ್ಕಿ ಅವರ ನೇತೃತ್ವದಲ್ಲಿ ಒಂದಾಗಿ ಸಕಲ ಸಿದ್ದತೆಯನ್ನು ಮಾಡಿದ್ದಾರೆ. ಹಾಗೆಯೆ ಅಂದು ಸಮಾರಂಭದಲ್ಲಿ ಅಕ್ಕಪಕ್ಕದ ಎಲ್ಲಾ ಜನಸಮುದಾಯದ ಜನಾಸಕ್ತರು ಭಾಗವಹಿಸಿದ್ದು, ನಿಜಕ್ಕೂ “ಇವನಮ್ಮವ” ಎಂಬ ಅಪ್ಪ ಸಂಗನಬಸವಣ್ಣ ಅವರ ಪವಿತ್ರ ವಚನವು ನೆನಪಿಗೆ ತರುವಂತೆ ಆಯೋಜನೆಗೊಂಡಿದೆ. ಅಂದು ಅಲ್ಲಮಪ್ರಭೂ ಅನುಭಾವ ಪೀಠ, ಕಾಂತಾವರ, ಕಾರ್ಕಳ, ಉಡುಪಿಯ ಶರಣ ಜಗನ್ನಾಥಪ್ಪ ಪನಸಾಲೆ ಜನವಾಡಾ ಅವರು ಬಸವಾದಿ ಶರಣರ ಅನೇಕ ಪವಿತ್ರ ವಚನಗಳನ್ನು ಉಲ್ಲೇಖಿಸುತ್ತಾ, ಅಪ್ಪ ಸಂಗನಬಸವಣ್ಣ ಅವರು ಹಾಕಿಕೊಟ್ಟ ಪಥವನ್ನು ನಾವೆಲ್ಲರೂ ಅನುಸರಿಸಿದರೆ ಮಾತ್ರ ಈ ಜಗತ್ತಿನ ಭಾವಿ ಜನಾಂಗವು ಸುರಕ್ಷಿತವಾಗಿ ಬದುಕಲು ಸಾಧ್ಯವೆಂಬ ಮಾತನ್ನು ಹಲವಾರು ದೃಷ್ಟಾಂತಗಳೊಂದಿಗೆ ಹೇಳಿದರು. ನಂತರ ಮಹಾಪ್ರಸಾದದೊಂದಿಗೆ ಕಾರ್ಯಕ್ರಮವು ಮಂಗಳವಾಗಿ ಮುಕ್ತಾಯಗೊಂಡಿತ್ತು, 

ಇತ್ತೀಚಿನ ಸುದ್ದಿ

ಜಾಹೀರಾತು