9:28 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾರ್ಯಕರ್ತನ ತಲೆಗೆ ಹೊಡೆದ ಡಿಕೆಶಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಏನು ಹೇಳಿದ್ರು ಗೊತ್ತೇ?

11/07/2021, 17:16

ಮಂಗಳೂರು(reporterkarnataka news): ಕಾರ್ಯಕರ್ತನ ತಲೆಗೆ ಬಾರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡತೆ ಸರಿಯಲ್ಲ. ಕಾಂಗ್ರೆಸ್ ಸಂಸ್ಕೃತಿ ಏನು ಅನ್ನುವುದು ಇದರಿಂದ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರುಈ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ರೌಡಿಗಳ ಪಕ್ಷ ಅಲ್ಲ ಅಂತ ಯಾರೂ ಹೇಳಲ್ಲ, ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ. ಅವರ ಇತಿಹಾಸ ತೆಗೆದು ನೋಡಿದ್ರೆ ರೌಡಿ ಮಾತ್ರವಲ್ಲ, ಈ ದೇಶದಲ್ಲಿ ಎಲ್ಲಾ ಕೆಟ್ಟ ಕೆಲಸಗಳಿಗೆ ಪ್ರೇರಣೆ ಅವರೇ ಎಂದರು.

ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಯವಾಗಿ ಮಾತನಾಡಲ್ಲ. ಆದ್ರೆ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ. ಕಾರ್ಯಕರ್ತರು ನಾಯಕರ ಬಳಿ ಅಪೇಕ್ಷೆ ಮತ್ತು ಬೇಡಿಕೆಯಿಟ್ಟು ಬರುತ್ತಾರೆ. ಆಗ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು ನಮ್ಮ ಸಂಸ್ಕೃತಿ. ಯಾರೇ ರಾಜಕಾರಣಿ ಆದ್ರೂ ಎಲ್ಲೆ ಮೀರಿ ವರ್ತಿಸಬಾರದು ಎಂದು ಅವರು ನುಡಿದರು.

ಇನ್ನು ವಿಧಾನಸೌಧದ ಒಳಗೆ ಸಿದ್ದರಾಮಯ್ಯ ಅವರು ತೊಡೆ ತಟ್ಟಿ ಯುದ್ದಕ್ಕೆ ಕರೆದು ಒಳಹೊಕ್ಕಿದವರು. ದೇವಸ್ಥಾನದ ಆಗಿರುವ ವಿಧಾನಸೌಧಕ್ಕೆ ಅಗೌರವ ತೋರಿದವರು ಕಾರ್ಯಕರ್ತರಿಗೆ ಗೌರವ ತೋರಿಸ್ತಾರಾ..? ಎಂದು ನಳಿನ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು